ಇದರಿಂದ ಮಾನಸಿಕ ಅಸ್ವಸ್ಥರ ಕುಟುಂಬಗಳಿಗೆ ತೊಂದರೆಯಾಗುತ್ತಿದೆ. ರೋಗಿಗಳನ್ನು ಬೇರೆಡೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಲು ಪೋಷಕರು ಆರ್ಥಿಕವಾಗಿ ನಿಶ್ಶಕ್ತರಾಗಿದ್ದು, ಕಾಯಿಲೆಯ ಲಕ್ಷಣಗಳು ಹೆಚ್ಚಾಗುತ್ತಿವೆ. ಹೀಗಾಗಿ, ಬಳ್ಳಾರಿ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ವೈದ್ಯಾಧಿಕಾರಿಗಳು ಶೀಘ್ರವೇ ಮಾನಸಿಕ ಆರೋಗ್ಯ ಶಿಬಿರಗಳನ್ನು ಆಯೋಜಿಸಿ, ರೋಗಿಗಳು ಹಾಗೂ ಅವರ ಕುಟುಂಬಗಳ ನೆರವಿಗೆ ಮುಂದಾಗಬೇಕು.