ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಸರ್ಕಾರವು ₹ 25,616 ಕೋಟಿ ಅನುದಾನ ಹಂಚಿಕೆ ಮಾಡಿ, ಸಮುದಾಯಗಳ ಸರ್ವಾಂಗೀಣ ಅಭಿವೃದ್ಧಿಗೆ ಕ್ರಮ ಕೈಗೊಂಡಿದ್ದರೂ ಕೆಲವು ಸಂಕುಚಿತ ಮನಸ್ಸುಗಳು ಮಾತ್ರ ಕೊರೊನಾ ಹಾಗೂ ಇನ್ನಿತರ ಕಾರಣಗಳನ್ನು ನೀಡಿ, ನಿಗದಿಪಡಿಸಿರುವ ಹಣದಲ್ಲಿ ಅರ್ಧಕ್ಕಿಂತ ಹೆಚ್ಚು ಹಣವನ್ನು ಹಾಗೇ ಖಾತೆಯಲ್ಲಿ ಉಳಿಸಿವೆ ಎಂದು ವರದಿಯಾಗಿದೆ. ಇದು, ಅಧಿಕಾರಿಗಳ ಕಾರ್ಯಕ್ಷಮತೆಗೆ ಹಿಡಿದ ಕನ್ನಡಿಯಾಗಿದೆ.