ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾದರಿ ಗ್ರಾಮಸ್ಥರು, ಪ್ರಚಾರಪ್ರಿಯ ನಾಯಕರು

Last Updated 1 ಜೂನ್ 2020, 19:45 IST
ಅಕ್ಷರ ಗಾತ್ರ

ಚಿಕ್ಕೋಡಿ ತಾಲ್ಲೂಕಿನ ನನದಿ ಗ್ರಾಮಸ್ಥರು ಶ್ರಮದಾನದ ಮೂಲಕ ಸ್ವತಃ ರಸ್ತೆ ನಿರ್ಮಿಸಿಕೊಂಡಿದ್ದಾರೆ.
(ಪ್ರ.ವಾ., ಜೂನ್‌ 1). ಇದೇ ರೀತಿ, ಮಡಿಕೇರಿ ತಾಲ್ಲೂಕಿನ ಮೊಣ್ಣಂಗೇರಿಯಲ್ಲಿ ಪ್ರಕೃತಿ ವಿಕೋಪದಿಂದ ಹಾಳಾಗಿದ್ದ ಸೇತುವೆ, ರಸ್ತೆ ತಡೆಗೋಡೆಗಳನ್ನು ಗ್ರಾಮಸ್ಥರೇ ನಿರ್ಮಿಸಿಕೊಂಡಿದ್ದಾರೆ (ಪ್ರ.ವಾ., ಮೇ 30). ಇಂತಹ ವರದಿಗಳು ಹಲವರಿಗೆ ಸ್ಫೂರ್ತಿ. ಇಡೀ ಜಗತ್ತೇ ಕೊರೊನಾ ಹಾವಳಿಯಿಂದ ತತ್ತರಿಸುತ್ತಿರುವಾಗ ನಮ್ಮ ಕೆಲವು ರಾಜಕಾರಣಿಗಳಿಗೆ ಕುರ್ಚಿ ಚಿಂತೆ. ಪ್ರವಾಹಪೀಡಿತರ ರಕ್ಷಣೆಗೆ ಬಳಸುವ ತೆಪ್ಪವನ್ನು ಉದ್ಘಾಟಿಸಲು ಬರುವ ಪ್ರಚಾರಪ್ರಿಯ ನಾಯಕರು ಇರುವಾಗ, ಮಳೆ, ಪ್ರವಾಹ, ಪ್ರಕೃತಿ ವಿಕೋಪದಂತಹ ನಮ್ಮ ಸಮಸ್ಯೆಗಳನ್ನು ಮೆಟ್ಟಿ ನಿಲ್ಲಲು ನಾವೇ ಪ್ರಯತ್ನಿಸುವುದು ಒಳಿತು.

-ಎಸ್.ನಾಗರಾಜ ನಾಗೂರ, ಬಾಗಲಕೋಟೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT