ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ್ತಷ್ಟು ಕ್ರೂರ

Last Updated 21 ಸೆಪ್ಟೆಂಬರ್ 2018, 17:20 IST
ಅಕ್ಷರ ಗಾತ್ರ

ಜೀತ ಪದ್ಧತಿ ಎಂಬುದು ಈಗ ಭೂಮಿಯ ಮೇಲೆ ಇಲ್ಲವೇ ಇಲ್ಲ ಎಂದು ನಮ್ಮಲ್ಲಿ ಬಹುತೇಕರು ಭಾವಿಸಿದ್ದಾರೆ. ಈ ಬಗ್ಗೆ ಯಾರನ್ನಾದರೂ ಕೇಳಿದರೆ ‘ನೀನು ಇನ್ನೂ ಯಾವ ಕಾಲದಲ್ಲಿದ್ದೀಯೋ’ ಎಂದು ಮರುಪ್ರಶ್ನೆ ಹಾಕಿ ನಮ್ಮ ಬಾಯಿ ಮುಚ್ಚಿಸಿಬಿಡುತ್ತಾರೆ. ಆದರೆ ವಾಸ್ತವದಲ್ಲಿ ಜೀತ ಪದ್ಧತಿ ಎಂಬುದು ಈಗ ಮತ್ತಷ್ಟು ಕ್ರೂರವಾಗಿದೆ.

ಸಾಲ ಮರುಪಾವತಿಸದ ಕಾರಣ ಮದ್ದೂರು ತಾಲ್ಲೂಕಿನ ಬೆಕ್ಕಳಲೆ ಗ್ರಾಮದ ಮಹಿಳೆಯೊಬ್ಬರನ್ನು ನಾಲ್ಕೈದು ಮಂದಿ ಗಂಡಸರು ಹಾಡಹಗಲೇ ಗ್ರಾಮಸ್ಥರ ಎದುರೇ ಜೀತಕ್ಕೆ ಎಳೆದೊಯ್ದ ಪ್ರಸಂಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿರುವುದೇ ಈ ಅನಿಷ್ಟ ಪದ್ಧತಿ ಇನ್ನೂ ಜೀವಂತ ಇದೆ ಎಂಬುದಕ್ಕೆ ನಿದರ್ಶನ.

ಇಂತಹ ಜೀವವಿರೋಧಿ ಪದ್ಧತಿಯನ್ನು ಇನ್ನೂ ಹೋಗಲಾಡಿಸಲಾಗದ ನಮ್ಮ ಆಡಳಿತ ವ್ಯವಸ್ಥೆಗೆ ತಾರತಮ್ಯರಹಿತ ಸಮಸಮಾಜ ನಿರ್ಮಿಸಲು, ವ್ಯಕ್ತಿಯ ಹಕ್ಕು ಮತ್ತು ಘನತೆ ರಕ್ಷಿಸಲು ಸಾಧ್ಯವೇ? ಇಂತಹದೊಂದು ಪ್ರಸಂಗ ಬಯಲಾದಾಗ ತೋರಿಕೆಯ ಕ್ರಮ ಕೈಗೊಳ್ಳುವುದರಿಂದ ಜೀತಪದ್ಧತಿಯ ನಿರ್ಮೂಲನೆ ಸಾಧ್ಯವಿಲ್ಲ. ಅದಕ್ಕೆ ಇಚ್ಛಾಶಕ್ತಿ ಮತ್ತು ಬದ್ಧತೆ ಬೇಕು. ಸರ್ಕಾರ ಈಗಲಾದರೂ ಅದನ್ನು ಪ್ರದರ್ಶಿಸಲಿ.

ಪ್ರಣಾಮ್ ಶೆಟ್ಟಿ, ಕಲ್ಲಡ್ಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT