‘ಮುಂಬೈ ಹೋಟೆಲ್ಗಳಲ್ಲಿ ಮೋಜು ಮಾಡುತ್ತಿರುವ ಅತೃಪ್ತ ಶಾಸಕರು ಸಾರ್ವಜನಿಕ ಹಿತಾಸಕ್ತಿಯಿಂದ ರಾಜೀನಾಮೆ ನೀಡಿದ್ದಾರೆ ಎಂದುಯಾವ ಮೂರ್ಖ ಹೇಳಲು ಸಾಧ್ಯ?’ ಎಂದು ದಿನೇಶ್ ಅಮಿನ್ ಮಟ್ಟು ತಮ್ಮ ಲೇಖನದಲ್ಲಿ (ಪ್ರ.ವಾ., ಜುಲೈ 15) ಪ್ರಶ್ನಿಸಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಬಳಿಕ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಕಳೆದ ವರ್ಷ ಕಾಂಗ್ರೆಸ್ ಸೇರಿದ ಏಳು ಜೆಡಿಎಸ್ ಶಾಸಕರ ರಾಜೀನಾಮೆಯಲ್ಲಿ ಸಾರ್ವಜನಿಕ ಹಿತಾಸಕ್ತಿ ಅಡಗಿತ್ತು ಎಂದು ಯಾವ ಮೂರ್ಖ ಹೇಳಲು ಸಾಧ್ಯವಿತ್ತು? 2017ರಲ್ಲಿ ಗುಜರಾತ್ನ ರಾಜ್ಯಸಭಾ ಚುನಾವಣೆ ಸಂದರ್ಭದಲ್ಲಿ, ಅಲ್ಲಿನ 44 ಶಾಸಕರನ್ನು ಬೆಂಗಳೂರಿನ ಹೊರವಲಯದ ಐಷಾರಾಮಿ ರೆಸಾರ್ಟ್ನಲ್ಲಿ ಇರಿಸಿದ್ದಾಗ ಅವರು ಉಪವಾಸವಿದ್ದರೇ? ಅವರು ಮಾಡಿದ್ದೂ ಮೋಜನ್ನೇ.