<p>ಮೈಸೂರು ನಗರದ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ, ಬೆಳೆಸಲು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಕೆಲವು ಪ್ರಮುಖ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ. ಇವುಗಳಲ್ಲಿ ಕೆಲವು ನಿರ್ಧಾರಗಳು ಸ್ವಾಗತಾರ್ಹವಾಗಿದ್ದರೂ ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣಕ್ಕೆ ಪರಿಸರವಾದಿಗಳಿಂದ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ಪರಿಸರವಾದಿಗಳೊಂದಿಗೆ ಸಚಿವರು ವಿಸ್ತೃತವಾದ ಚರ್ಚೆ ನಡೆಸಬೇಕಾಗಿದೆ. ಅದೇ ರೀತಿ ಪ್ರತಿವರ್ಷ ಆಚರಿಸಲಾಗುವ ನಾಡಹಬ್ಬ ದಸರೆಯನ್ನು ನಿರ್ವಹಿಸಲು ಒಂದು ಶಾಶ್ವತವಾದ ಸ್ವಾಯತ್ತ ಮಂಡಲಿ ರಚಿಸುವುದು ಈಗಿನ ತುರ್ತು ಅಗತ್ಯವಾಗಿದೆ. ಈ ಮಂಡಳಿಯು ಮೈಸೂರಿನ ರಾಜ ಪ್ರಮುಖರು, ಉಸ್ತುವಾರಿ ಸಚಿವರು, ಲೋಕಸಭಾ ಸದಸ್ಯರು ಸೇರಿದಂತೆ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು, ಸ್ಥಳೀಯ ಗಣ್ಯ ನಾಗರಿಕರು, ಪತ್ರಕರ್ತರು ಹಾಗೂ ವಿವಿಧ ಕ್ಷೇತ್ರಗಳ ಸಾಧಕರನ್ನು ಒಳಗೊಂಡಿರಬೇಕು.</p>.<p>ದೆಹಲಿಯ ಪ್ರಗತಿ ಮೈದಾನದ ಮಾದರಿಯಲ್ಲಿ ನಗರದಲ್ಲಿ ಕೂಡ ವಸ್ತುಪ್ರದರ್ಶನವನ್ನು ವರ್ಷಪೂರ್ತಿ ನಡೆಸುವ ಕಾರ್ಯಕ್ರಮ ರೂಪಿಸಬಹುದು. ದಸರಾ ಹಬ್ಬದ ಸಂದರ್ಭದಲ್ಲಿ ನಡೆಸುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸ್ಥಳೀಯ ಪ್ರತಿಭೆಗಳಿಗೂ ಆದ್ಯತೆ ನೀಡುವಂತೆ ಆಗಬೇಕು.</p>.<p><em><strong>-ಡಾ. ಕೆ.ವಿ.ವಾಸು, ಮೈಸೂರು</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮೈಸೂರು ನಗರದ ಸಾಂಸ್ಕೃತಿಕ ಪರಂಪರೆಯನ್ನು ಉಳಿಸಿ, ಬೆಳೆಸಲು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಕೆಲವು ಪ್ರಮುಖ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ. ಇವುಗಳಲ್ಲಿ ಕೆಲವು ನಿರ್ಧಾರಗಳು ಸ್ವಾಗತಾರ್ಹವಾಗಿದ್ದರೂ ಚಾಮುಂಡಿ ಬೆಟ್ಟಕ್ಕೆ ರೋಪ್ ವೇ ನಿರ್ಮಾಣಕ್ಕೆ ಪರಿಸರವಾದಿಗಳಿಂದ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ಪರಿಸರವಾದಿಗಳೊಂದಿಗೆ ಸಚಿವರು ವಿಸ್ತೃತವಾದ ಚರ್ಚೆ ನಡೆಸಬೇಕಾಗಿದೆ. ಅದೇ ರೀತಿ ಪ್ರತಿವರ್ಷ ಆಚರಿಸಲಾಗುವ ನಾಡಹಬ್ಬ ದಸರೆಯನ್ನು ನಿರ್ವಹಿಸಲು ಒಂದು ಶಾಶ್ವತವಾದ ಸ್ವಾಯತ್ತ ಮಂಡಲಿ ರಚಿಸುವುದು ಈಗಿನ ತುರ್ತು ಅಗತ್ಯವಾಗಿದೆ. ಈ ಮಂಡಳಿಯು ಮೈಸೂರಿನ ರಾಜ ಪ್ರಮುಖರು, ಉಸ್ತುವಾರಿ ಸಚಿವರು, ಲೋಕಸಭಾ ಸದಸ್ಯರು ಸೇರಿದಂತೆ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು, ಸ್ಥಳೀಯ ಗಣ್ಯ ನಾಗರಿಕರು, ಪತ್ರಕರ್ತರು ಹಾಗೂ ವಿವಿಧ ಕ್ಷೇತ್ರಗಳ ಸಾಧಕರನ್ನು ಒಳಗೊಂಡಿರಬೇಕು.</p>.<p>ದೆಹಲಿಯ ಪ್ರಗತಿ ಮೈದಾನದ ಮಾದರಿಯಲ್ಲಿ ನಗರದಲ್ಲಿ ಕೂಡ ವಸ್ತುಪ್ರದರ್ಶನವನ್ನು ವರ್ಷಪೂರ್ತಿ ನಡೆಸುವ ಕಾರ್ಯಕ್ರಮ ರೂಪಿಸಬಹುದು. ದಸರಾ ಹಬ್ಬದ ಸಂದರ್ಭದಲ್ಲಿ ನಡೆಸುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸ್ಥಳೀಯ ಪ್ರತಿಭೆಗಳಿಗೂ ಆದ್ಯತೆ ನೀಡುವಂತೆ ಆಗಬೇಕು.</p>.<p><em><strong>-ಡಾ. ಕೆ.ವಿ.ವಾಸು, ಮೈಸೂರು</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>