<p>ಅಪರೂಪದ ತಳಿಯಾಗಿದ್ದು ಭೌಗೋಳಿಕ ಮಾನ್ಯತೆ ಪಡೆದಿದ್ದರೂ ಬೆಳೆ ಪ್ರಮಾಣ ಕುಂಠಿತವಾಗುತ್ತಿರುವ ಜನಪ್ರಿಯ ‘ನಂಜನಗೂಡು ರಸಬಾಳೆ’ಯನ್ನು ಬೆಳೆಯಲು ರೈತರನ್ನು ಉತ್ತೇಜಿಸುವಂತೆ ತೋಟಗಾರಿಕಾ ಅಧಿಕಾರಿಗಳಿಗೆ ಮೈಸೂರಿನ ಜಿಲ್ಲಾಧಿಕಾರಿ ಸೂಚನೆ ಕೊಟ್ಟಿದ್ದಾರೆ. ನಂಜನಗೂಡು ತಾಲ್ಲೂಕಿನ ಫಲವತ್ತಾದ ಕಪ್ಪು ಮಣ್ಣಿನಿಂದ ಕೂಡಿರುವ ದೇವರಸನಹಳ್ಳಿ ಎಂಬ ಗ್ರಾಮದಲ್ಲಿ ಮೊದಲು ಈ ಬೆಳೆಯನ್ನು ಹೆಚ್ಚಾಗಿ ಬೆಳೆಯಲಾಗುತ್ತಿತ್ತು. ಇದೀಗ ಈ ವಿಶೇಷ ರಸಬಾಳೆ ಬೆಳೆಯುವ ಪ್ರದೇಶದ ಪ್ರಮಾಣ ತೀರಾ ಕಡಿಮೆಯಾಗಲು ಏನು ಕಾರಣ, ಈ ಬೆಳೆಯನ್ನು ಹೆಚ್ಚಿನ ಪ್ರದೇಶಕ್ಕೆ ವಿಸ್ತರಿಸಲು ಯಾವ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಗಂಭೀರವಾದ ಚಿಂತನೆ ನಡೆಯಬೇಕಾಗಿದೆ.</p>.<p>ಸರ್ಕಾರ ಆಧುನಿಕ ತಂತ್ರಜ್ಞಾನ ಬಳಸಿಕೊಂಡು, ರೈತರಿಗೆ ಹೆಚ್ಚಿನ ಪ್ರೋತ್ಸಾಹ ನೀಡಿದರೆ ಈ ತಳಿ ಉಳಿಯುವಂತೆ ಮಾಡಬಹುದು. ರಸಬಾಳೆಯ ವೈಶಿಷ್ಟ್ಯದ ಬಗ್ಗೆ ಹೆಚ್ಚಿನ ತಿಳಿವಳಿಕೆ ಇಲ್ಲದಿದ್ದರೆ ಅದು ಅಳಿದುಹೋಗುವ ಸಾಧ್ಯತೆಯೇ ಹೆಚ್ಚು. ಸ್ವಾದಿಷ್ಟ ಮತ್ತು ಪೋಷಕಾಂಶಯುಕ್ತವಾದ ಈ ಹಣ್ಣನ್ನು ಸಂರಕ್ಷಿಸಬೇಕಾದ ಅಗತ್ಯ ಇದೆ. ಈ ದಿಸೆಯಲ್ಲಿ ಸ್ಥಳೀಯ ಆಡಳಿತ ಹೆಚ್ಚು ಮುತುವರ್ಜಿ ವಹಿಸಲಿ.</p>.<p><strong><em>–ಅನಿಲ್ ಕುಮಾರ್, ನಂಜನಗೂಡು</em></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅಪರೂಪದ ತಳಿಯಾಗಿದ್ದು ಭೌಗೋಳಿಕ ಮಾನ್ಯತೆ ಪಡೆದಿದ್ದರೂ ಬೆಳೆ ಪ್ರಮಾಣ ಕುಂಠಿತವಾಗುತ್ತಿರುವ ಜನಪ್ರಿಯ ‘ನಂಜನಗೂಡು ರಸಬಾಳೆ’ಯನ್ನು ಬೆಳೆಯಲು ರೈತರನ್ನು ಉತ್ತೇಜಿಸುವಂತೆ ತೋಟಗಾರಿಕಾ ಅಧಿಕಾರಿಗಳಿಗೆ ಮೈಸೂರಿನ ಜಿಲ್ಲಾಧಿಕಾರಿ ಸೂಚನೆ ಕೊಟ್ಟಿದ್ದಾರೆ. ನಂಜನಗೂಡು ತಾಲ್ಲೂಕಿನ ಫಲವತ್ತಾದ ಕಪ್ಪು ಮಣ್ಣಿನಿಂದ ಕೂಡಿರುವ ದೇವರಸನಹಳ್ಳಿ ಎಂಬ ಗ್ರಾಮದಲ್ಲಿ ಮೊದಲು ಈ ಬೆಳೆಯನ್ನು ಹೆಚ್ಚಾಗಿ ಬೆಳೆಯಲಾಗುತ್ತಿತ್ತು. ಇದೀಗ ಈ ವಿಶೇಷ ರಸಬಾಳೆ ಬೆಳೆಯುವ ಪ್ರದೇಶದ ಪ್ರಮಾಣ ತೀರಾ ಕಡಿಮೆಯಾಗಲು ಏನು ಕಾರಣ, ಈ ಬೆಳೆಯನ್ನು ಹೆಚ್ಚಿನ ಪ್ರದೇಶಕ್ಕೆ ವಿಸ್ತರಿಸಲು ಯಾವ ಕ್ರಮ ಕೈಗೊಳ್ಳಬೇಕು ಎಂಬ ಬಗ್ಗೆ ಗಂಭೀರವಾದ ಚಿಂತನೆ ನಡೆಯಬೇಕಾಗಿದೆ.</p>.<p>ಸರ್ಕಾರ ಆಧುನಿಕ ತಂತ್ರಜ್ಞಾನ ಬಳಸಿಕೊಂಡು, ರೈತರಿಗೆ ಹೆಚ್ಚಿನ ಪ್ರೋತ್ಸಾಹ ನೀಡಿದರೆ ಈ ತಳಿ ಉಳಿಯುವಂತೆ ಮಾಡಬಹುದು. ರಸಬಾಳೆಯ ವೈಶಿಷ್ಟ್ಯದ ಬಗ್ಗೆ ಹೆಚ್ಚಿನ ತಿಳಿವಳಿಕೆ ಇಲ್ಲದಿದ್ದರೆ ಅದು ಅಳಿದುಹೋಗುವ ಸಾಧ್ಯತೆಯೇ ಹೆಚ್ಚು. ಸ್ವಾದಿಷ್ಟ ಮತ್ತು ಪೋಷಕಾಂಶಯುಕ್ತವಾದ ಈ ಹಣ್ಣನ್ನು ಸಂರಕ್ಷಿಸಬೇಕಾದ ಅಗತ್ಯ ಇದೆ. ಈ ದಿಸೆಯಲ್ಲಿ ಸ್ಥಳೀಯ ಆಡಳಿತ ಹೆಚ್ಚು ಮುತುವರ್ಜಿ ವಹಿಸಲಿ.</p>.<p><strong><em>–ಅನಿಲ್ ಕುಮಾರ್, ನಂಜನಗೂಡು</em></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>