ನಮ್ಮ ರಾಜ್ಯದಲ್ಲಿನ ಶಿಕ್ಷಣ ವಲಯವು ಎನ್ಇಪಿ ಎಂಬ ಹೊಸ ಪ್ರಯೋಗಕ್ಕೆ ಸಿದ್ಧವಾಗಿಲ್ಲ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ. ಮೇಲಾಗಿ ಕೋವಿಡ್ನಿಂದಾಗಿ ನಮ್ಮ ಮಕ್ಕಳು, ವಿಶೇಷವಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಒಬಿಸಿ ಮಕ್ಕಳು, ಅದರಲ್ಲೂ ಗ್ರಾಮೀಣ ಪ್ರದೇಶದ ಮಕ್ಕಳು, ಆನ್ಲೈನ್ ಪಾಠ ಪಡೆದು ಕೊಳ್ಳುವುದು ಸಾಧ್ಯವಾಗದೆ, ಶಿಕ್ಷಣದಿಂದ ವಂಚಿತರಾಗಿದ್ದಾರೆ. ಇದನ್ನು ಸರಿಪಡಿಸುವುದು ನಮ್ಮ ಆದ್ಯತೆಯಾಗಬೇಕು. ಇದರ ಬಗ್ಗೆ ಸರ್ಕಾರ ಮಾತನಾಡುತ್ತಿಲ್ಲ. ನಾಡಿನ ಎಲ್ಲ ಹಕ್ಕುದಾರರ ಜೊತೆಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಸರ್ಕಾರವಿಸ್ತೃತ ಸಮಾಲೋಚನೆ ನಡೆಸಿಲ್ಲ. ಆದ್ದರಿಂದ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸುವುದನ್ನು
ನಿಲ್ಲಿಸಬೇಕು ಮತ್ತು ಇದರ ಇತಿಮಿತಿಗಳ ಬಗ್ಗೆ ಮತ್ತು ಇದರಲ್ಲಿನ ತಾರತಮ್ಯವಾದಿ ಸಂಗತಿಗಳ ಬಗ್ಗೆ ವ್ಯಾಪಕ ಚರ್ಚೆಗಳನ್ನು ನಡೆಸಬೇಕು.