ವಿಜಯದಶಮಿಯಂದು ನಾಗಪುರದಲ್ಲಿ ಮಾತನಾಡಿದ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು, ‘ದೇಶದಲ್ಲಿ ಆರ್ಥಿಕ ಹಿಂಜರಿತ ಇಲ್ಲ. ಜಿಡಿಪಿ ಮತ್ತು ದೇಶದ ಅಭಿವೃದ್ಧಿಗೆ ನೇರ ಸಂಬಂಧವಿಲ್ಲ. ಈ ಬಗ್ಗೆ ಅತಿಯಾಗಿ ಚರ್ಚೆ ನಡೆಸುವ ಅವಶ್ಯಕತೆ ಇಲ್ಲ’ ಎಂದು ಕಟ್ಟಪ್ಪಣೆ ಹೊರಡಿಸಿದ್ದಾರೆ. ಆದರೆ ಅದೇ ದಿನ ಪತ್ರಿಕೆಗಳಲ್ಲಿ, ‘ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ಲಕ್ಷಾಂತರ ಮಂದಿ ಉದ್ಯೋಗ ಕಳೆದುಕೊಂಡು, ದಸರಾ ಆಚರಿಸಿಲ್ಲ. ವಿವಿಧ ಕೈಗಾರಿಕೆಗಳು ತಮ್ಮ ಉದ್ಯೋಗಿಗಳ ಸಂಖ್ಯೆ ಕಡಿತ ಮಾಡಿ, ಕೆಲಸದ ದಿನಗಳನ್ನು ಕಡಿಮೆ ಮಾಡುತ್ತಿವೆ. ಕೈಗಾರಿಕೆಗಳು ಸಂಕಷ್ಟದಲ್ಲಿದ್ದು, ಹಬ್ಬಕ್ಕೆ ಬೋನಸ್ ಕೊಡುತ್ತಿಲ್ಲ’ ಎಂದು ವರದಿಯಾಗಿದೆ. ಇವುಗಳಲ್ಲಿ ಯಾವುದು ಸತ್ಯ?