ದೇಶದಲ್ಲಿ ಪ್ರತಿದಿನ ಸಾವಿರಾರು ಸಂಖ್ಯೆಯಲ್ಲಿ ರೈಲುಗಳು ಪ್ರಯಾಣಿಕರನ್ನು ಹೊತ್ತು ಸಂಚರಿಸುತ್ತವೆ. ಇದೊಂದು ರೀತಿ ಜನಸ್ನೇಹಿ ಸಾರಿಗೆ ವ್ಯವಸ್ಥೆ. ಆದರೆ ನಮ್ಮ ರೈಲ್ವೆಗೆ ಆಧುನಿಕ ಸ್ಪರ್ಶ ಬೇಕಾಗಿದೆ. ರಾತ್ರಿ ಹೊತ್ತು ಪ್ರಯಾಣಿಕರು ತಾವು ಎಲ್ಲಿ ಇದ್ದೇವೆ ಎಂದು ತಿಳಿದುಕೊಳ್ಳಲು ಸಾಧ್ಯವಾಗದೆ, ಇಳಿಯಬೇಕಾದ ನಿಲ್ದಾಣಕ್ಕೆ ಬದಲಾಗಿ ಹಿಂದಿನ ಅಥವಾ ಮುಂದಿನ ನಿಲ್ದಾಣಗಳಲ್ಲಿ ಇಳಿದ ಉದಾಹರಣೆಗಳು ಬಹಳಷ್ಟಿವೆ.