ರಾಜ್ಯದಲ್ಲಿ ಲಾಕ್ಡೌನ್ ಇರುವುದರಿಂದ ಜನರಿಗೆ ಕೆಲಸ ಕಾರ್ಯಗಳು ಇಲ್ಲದೆ ಜೀವನ ನಡೆಸುವುದು ತುಂಬಾ ಕಷ್ಟವಾಗಿದೆ. ಚುನಾವಣೆಯ ಸಂದರ್ಭದಲ್ಲಿ ಚುನಾವಣೆಗೆ ಸ್ಪರ್ಧಿಸುವ ನಾಯಕರು ಮತ್ತು ಅವರ ಬೆಂಬಲಿಗರು ವೋಟಿಗಾಗಿ ಬಡಜನರ ಮನೆಮನೆಗೂ ಹೋಗಿ, ಅವರ ಯೋಗಕ್ಷೇಮ ವಿಚಾರಿಸುತ್ತಾರೆ. ವೋಟಿಗಾಗಿ ನೋಟು ಜೊತೆಗೆ ಮಾಂಸ, ಮದ್ಯವನ್ನು ಕೊಟ್ಟು, ‘ಹಾಗೆ ಮಾಡುತ್ತೇವೆ, ಹೀಗೆ ಮಾಡುತ್ತೇವೆ’ ಎಂದೆಲ್ಲ ಆಶ್ವಾಸನೆ ಕೊಡುತ್ತಾರೆ. ಆದರೆ ಅವರೆಲ್ಲ ಈಗ ಎಲ್ಲಿದ್ದಾರೆ?