ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಬಡಕುಟುಂಬಗಳಿಗೆ ವಾರ್ಷಿಕ ₹ 72,000 ನೀಡುವ ಕನಿಷ್ಠ ಆದಾಯ ಖಾತರಿ ಯೋಜನೆಯನ್ನು ಜಾರಿಗೆ ತರುವುದಾಗಿ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಘೋಷಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಕಿಸಾನ್ ಸಮ್ಮಾನ್ ಯೋಜನೆ ರೂಪಿಸಿ, ಬಡ ರೈತರಿಗೆ ವರ್ಷಕ್ಕೆ ನೇರವಾಗಿ₹ 6,000 ನೀಡುವ ಯೋಜನೆಯನ್ನು ಘೋಷಿಸಿದಾಗ ರಾಹುಲ್ ಅದನ್ನು ಟೀಕಿಸಿದ್ದರು. ಈಗ ಅವರೇ ಅದರ ಹಲವು ಪಟ್ಟು ಹೆಚ್ಚು ಮೊತ್ತವನ್ನು ಬಡವರಿಗೆ ನೀಡುವುದಾಗಿ ಹೇಳಿದ್ದಾರೆ.