ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ: ಮಕ್ಕಳಿಗಾಗಿ ಅತ್ಯುತ್ತಮ ಉಡುಗೊರೆ

Last Updated 11 ನವೆಂಬರ್ 2020, 19:30 IST
ಅಕ್ಷರ ಗಾತ್ರ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು 6-18 ವರ್ಷದ ಮಕ್ಕಳಿಗಾಗಿ ‘ಓದುವ ಬೆಳಕು’ ಯೋಜನೆಯನ್ನು ಇದೇ 14ರಂದು ಜಾರಿಗೊಳಿಸಲಿರುವುದು ಶ್ಲಾಘನೀಯ. ಕೋವಿಡ್– 19 ಕಾರಣದಿಂದ ಜೀವನ ಸಾಗಿಸುವುದೇ ಕಷ್ಟವಾಗಿರುವ ಈ ಸಮಯದಲ್ಲಿ ಎಷ್ಟೋ ಪೋಷಕರಿಗೆ ಮೊಬೈಲ್, ಟ್ಯಾಬ್, ಲ್ಯಾಪ್‌ಟಾಪ್‌ಗಳನ್ನು ಮಕ್ಕಳಿಗಾಗಿ ಕೊಡಿಸಲಾಗುತ್ತಿಲ್ಲ. ಇದರಿಂದ ಅವರು ಕಲಿಕೆಯಿಂದ ವಿಮುಖರಾಗುತ್ತಿದ್ದಾರೆ. ಇಂತಹ ಸಂಕೀರ್ಣ ಸಮಯದಲ್ಲಿ ಎಲ್ಲ ಪಂಚಾಯಿತಿಗಳಲ್ಲಿ ಈ ಯೋಜನೆಯನ್ನು ಪ್ರಾರಂಭಿಸುತ್ತಿರುವುದು ಮಕ್ಕಳಲ್ಲಿ ಓದುವ ಅಭಿರುಚಿ, ಜ್ಞಾನ ವೃದ್ಧಿ, ಮಾನಸಿಕ ಬೆಳವಣಿಗೆಗೆ ನೆರವಾಗುತ್ತದೆ. ಈ ಯೋಜನೆಯು ಮಕ್ಕಳ ದಿನಾಚರಣೆಯಂದು ಸರ್ಕಾರ ಮಕ್ಕಳಿಗೆ ಕೊಡುವ ಅತ್ಯುತ್ತಮ ಉಡುಗೊರೆಯೇ ಸರಿ.

-ಬಿ.ಎಸ್.ಚೈತ್ರ, ಚಿತ್ರದುರ್ಗ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT