ಹಿಂದಿನ ಕಾಲದಲ್ಲಿ ರೈತರೆಲ್ಲರೂ ಶೇಂಗಾ, ಕುಸುಬೆಯಂತಹ ಎಣ್ಣೆಕಾಳು ಬೆಳೆಗಳನ್ನು ಬೆಳೆಯುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ರಸಗೊಬ್ಬರ, ಬಿತ್ತನೆ ಬೀಜ, ಕೂಲಿ ದರ ಹೆಚ್ಚಳವಾಗಿದೆ. ಕೂಲಿಕಾರ್ಮಿಕರ ಸಮಸ್ಯೆ ಇದೆ. ಎಣ್ಣೆಕಾಳು ಬೆಳೆಗಳ ಇಳುವರಿ ಕಡಿಮೆ ಮತ್ತು ನಿರ್ವಹಣಾ ವೆಚ್ಚ ಹೆಚ್ಚು. ಇದಕ್ಕೆ ತಕ್ಕಂತೆ ಮಾರುಕಟ್ಟೆಯಲ್ಲಿ ಎಣ್ಣೆಕಾಳು ಬೆಳೆಗಳಿಗೆ ಸೂಕ್ತ ಬೆಲೆ ಸಿಗದಿರುವುದು ಅದರ ಉತ್ಪಾದನೆಗೆ ಹೊಡೆತ ಬಿದ್ದಂತಾಗಿದೆ. ರೈತರು ಕೂಡ ಬೇರೆ ವಾಣಿಜ್ಯ ಬೆಳೆಗಳಿಗೆ ಮೊರೆ ಹೋದರು.