<p>ಕಳೆದ 10 ತಿಂಗಳಿನಿಂದ ಶಾಲಾ ವಿದ್ಯಾರ್ಥಿಗಳನ್ನು ಜ್ಞಾನದ ಕೊರತೆ ಕಾಡುತ್ತಿದೆ. ಶಾಲೆ ಮರೆತುಹೋಗಿದೆ. ಶಿಕ್ಷಕರ ನೇರ ಸಂಪರ್ಕ ತಪ್ಪಿದೆ. ಮಕ್ಕಳು ಅಲ್ಲಿ ಇಲ್ಲಿ ಸುತ್ತುತ್ತಾ ಕಾಲ ಕಳೆಯುವ ಬದಲು, ಶಾಲೆಗೆ ಬರಲು ಸರ್ಕಾರವು ಅಧಿಕೃತ ಆಹ್ವಾನ ಕೊಡಲಿ. ಹೆಚ್ಚಿನ ಮಕ್ಕಳಿಗೆ ಒತ್ತಾಸೆ ಇಲ್ಲದ್ದರಿಂದ ಓದಿನ ಕಡೆ ಗಮನವನ್ನೂ ಕೊಡಲಾಗದೆ, ಮನೆಯಲ್ಲಿ ಕಾಲ ಕಳೆಯಲೂ ಆಗದೆ ಮನಸ್ಸಿಗೆ ಬಂದಂತೆ ಇದ್ದಾರೆ. ಇದಕ್ಕಿಂತ ಶಾಲೆಯಲ್ಲಿ ಪಾಠ ಪ್ರವಚನಗಳನ್ನು ಕೇಳುವುದು ಒಳ್ಳೆಯದು. ಇದರಿಂದ ಅವರು ಮಾನಸಿಕವಾಗಿ ಸದೃಢರಾಗುತ್ತಾರೆ.</p>.<p>ಕೋವಿಡ್ ನಿಯಂತ್ರಣ ಕ್ರಮಗಳ ಕುರಿತಂತೆ ಶಿಕ್ಷಕರ ಮೇಲ್ವಿಚಾರಣೆ ಇರುವುದರಿಂದ ಮಕ್ಕಳು ಕೊರೊನಾ ಸೋಂಕಿನ ಅಪಾಯಕ್ಕೆ ಸಿಲುಕುವ ಸಾಧ್ಯತೆ ಇರುವುದಿಲ್ಲ. ಜೊತೆಗೆ ಮಕ್ಕಳಲ್ಲಿ ರೋಗನಿರೋಧಕ ಶಕ್ತಿಯೂ ಹೆಚ್ಚಾಗಿ ಇರುವುದರಿಂದ ಅನಗತ್ಯ ಆತಂಕ ಪಡುವ ಅಗತ್ಯವೂ ಇಲ್ಲ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಪೋಷಕರ ಚಿಂತೆ, ಮಕ್ಕಳ ಕಲ್ಯಾಣ, ಅವರ ಜ್ಞಾನ ವಿಕಾಸದ ಅಗತ್ಯ ಎಲ್ಲವನ್ನೂ ಪರಿಗಣಿಸಿ ಶಾಲೆಗಳನ್ನು ಆದಷ್ಟು ಬೇಗ ತೆರೆಯಬೇಕಾಗಿದೆ. ಈ ಬಗ್ಗೆ ಸರ್ಕಾರ ದೃಢ ನಿರ್ಧಾರ ಕೈಗೊಳ್ಳಲಿ.</p>.<p><strong>ಎಚ್.ಎಸ್.ಟಿ.ಸ್ವಾಮಿ, ಚಿತ್ರದುರ್ಗ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಳೆದ 10 ತಿಂಗಳಿನಿಂದ ಶಾಲಾ ವಿದ್ಯಾರ್ಥಿಗಳನ್ನು ಜ್ಞಾನದ ಕೊರತೆ ಕಾಡುತ್ತಿದೆ. ಶಾಲೆ ಮರೆತುಹೋಗಿದೆ. ಶಿಕ್ಷಕರ ನೇರ ಸಂಪರ್ಕ ತಪ್ಪಿದೆ. ಮಕ್ಕಳು ಅಲ್ಲಿ ಇಲ್ಲಿ ಸುತ್ತುತ್ತಾ ಕಾಲ ಕಳೆಯುವ ಬದಲು, ಶಾಲೆಗೆ ಬರಲು ಸರ್ಕಾರವು ಅಧಿಕೃತ ಆಹ್ವಾನ ಕೊಡಲಿ. ಹೆಚ್ಚಿನ ಮಕ್ಕಳಿಗೆ ಒತ್ತಾಸೆ ಇಲ್ಲದ್ದರಿಂದ ಓದಿನ ಕಡೆ ಗಮನವನ್ನೂ ಕೊಡಲಾಗದೆ, ಮನೆಯಲ್ಲಿ ಕಾಲ ಕಳೆಯಲೂ ಆಗದೆ ಮನಸ್ಸಿಗೆ ಬಂದಂತೆ ಇದ್ದಾರೆ. ಇದಕ್ಕಿಂತ ಶಾಲೆಯಲ್ಲಿ ಪಾಠ ಪ್ರವಚನಗಳನ್ನು ಕೇಳುವುದು ಒಳ್ಳೆಯದು. ಇದರಿಂದ ಅವರು ಮಾನಸಿಕವಾಗಿ ಸದೃಢರಾಗುತ್ತಾರೆ.</p>.<p>ಕೋವಿಡ್ ನಿಯಂತ್ರಣ ಕ್ರಮಗಳ ಕುರಿತಂತೆ ಶಿಕ್ಷಕರ ಮೇಲ್ವಿಚಾರಣೆ ಇರುವುದರಿಂದ ಮಕ್ಕಳು ಕೊರೊನಾ ಸೋಂಕಿನ ಅಪಾಯಕ್ಕೆ ಸಿಲುಕುವ ಸಾಧ್ಯತೆ ಇರುವುದಿಲ್ಲ. ಜೊತೆಗೆ ಮಕ್ಕಳಲ್ಲಿ ರೋಗನಿರೋಧಕ ಶಕ್ತಿಯೂ ಹೆಚ್ಚಾಗಿ ಇರುವುದರಿಂದ ಅನಗತ್ಯ ಆತಂಕ ಪಡುವ ಅಗತ್ಯವೂ ಇಲ್ಲ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಪೋಷಕರ ಚಿಂತೆ, ಮಕ್ಕಳ ಕಲ್ಯಾಣ, ಅವರ ಜ್ಞಾನ ವಿಕಾಸದ ಅಗತ್ಯ ಎಲ್ಲವನ್ನೂ ಪರಿಗಣಿಸಿ ಶಾಲೆಗಳನ್ನು ಆದಷ್ಟು ಬೇಗ ತೆರೆಯಬೇಕಾಗಿದೆ. ಈ ಬಗ್ಗೆ ಸರ್ಕಾರ ದೃಢ ನಿರ್ಧಾರ ಕೈಗೊಳ್ಳಲಿ.</p>.<p><strong>ಎಚ್.ಎಸ್.ಟಿ.ಸ್ವಾಮಿ, ಚಿತ್ರದುರ್ಗ</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>