‘ಆಪರೇಷನ್ ಕಮಲ’ಕ್ಕೆ ಸಂಬಂಧಿಸಿದ ಆಡಿಯೊದಲ್ಲಿ ವಿಧಾನಸಭಾಧ್ಯಕ್ಷ ರಮೇಶ್ ಕುಮಾರ್ ಅವರ ಹೆಸರು ಪ್ರಸ್ತಾಪವಾದ ಕಾರಣ, ಅದರ ಸತ್ಯಾಸತ್ಯತೆಯ ತನಿಖೆಗಾಗಿ ವಿಶೇಷ ತನಿಖಾ ದಳ (ಎಸ್ಐಟಿ) ರಚಿಸುವುದಾಗಿ ರಾಜ್ಯ ಸರ್ಕಾರ ಹೇಳಿತ್ತು. ಆದರೆ ಅದು ಈಗ ಈ ಬಗ್ಗೆ ನಿರ್ಲಕ್ಷ್ಯ ವಹಿಸಿರುವುದು ವರದಿಯಾಗಿದೆ(ಪ್ರ.ವಾ., ಜೂನ್ 24). ಇದರಿಂದಾಗಿ, ತನಿಖೆಯು ತಾರ್ಕಿಕ ಅಂತ್ಯ ಕಾಣದೆ, ಸಭಾಧ್ಯಕ್ಷರ ಮೇಲಿದ್ದಗುರುತರ ಆಪಾದನೆ ಹಾಗೆಯೇ ಉಳಿದುಬಿಟ್ಟಿದೆ. ಅಧಿವೇಶನದ ಸಂದರ್ಭದಲ್ಲಿ ಸಿ.ಡಿ. ಬಿಡುಗಡೆ ಮಾಡುವ
ಮೂಲಕ ಸರ್ಕಾರ ರಾಜಕೀಯ ಲಾಭ ಮಾಡಿಕೊಂಡಂತೆ ತೋರುತ್ತದೆ. ಏಕೆಂದರೆ, ಆಗ ಪತನಗೊಳ್ಳುವ ಭೀತಿ ಸರ್ಕಾರಕ್ಕೆ ಎದುರಾಗಿತ್ತು. ಈ ಸಂಕಷ್ಟದಿಂದ ಪಾರಾಗಲು ಮುಖ್ಯಮಂತ್ರಿ ಅವರಿಗೆಈ ಸಿ.ಡಿ. ಸುವರ್ಣಾವಕಾಶವನ್ನೇ ಒದಗಿಸಿತು.