ನೀರಾವರಿ ಭೂಮಿ ಹೊಂದಿರುವ ರೈತರಿಗೆ ಹೆಚ್ಚಿನ ಪ್ರಮಾಣದಲ್ಲಿ ಎಣ್ಣೆಕಾಳು ಬೆಳೆಯಲು ಸರ್ಕಾರವು ಸೂರ್ಯಕಾಂತಿ, ಸೋಯಾಬೀನ್, ಶೇಂಗಾ ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸಬೇಕು ಹಾಗೂ ಸಹಾಯಧನ ನೀಡ ಬೇಕು. ಜೊತೆಗೆ ಈ ಬೆಳೆಗಳ ಉತ್ಪನ್ನಕ್ಕೆ ಸೂಕ್ತವಾದ ಮಾರುಕಟ್ಟೆ ಒದಗಿಸಿ ರೈತರನ್ನು ಪ್ರೋತ್ಸಾಹಿಸುವ ಕೆಲಸವನ್ನು ಜರೂರಾಗಿ ಮಾಡಬೇಕು.