<p>ನಮ್ಮ ಸಂಸದ ಡಿ.ಕೆ.ಸುರೇಶ್ ಮೊನ್ನೆ ಸಂಸತ್ ಅಧಿವೇಶನಕ್ಕೆ ಸೈಕಲ್ ಮೇಲೆ ಹೋದರೆಂಬ ಸುದ್ದಿ ಓದಿ ನನ್ನಂಥ ಅನೇಕ ಪರಿಸರಪ್ರೇಮಿಗಳಿಗೆ ತುಂಬ ಸಂತೋಷವಾಗಿದೆ. ಪೆಟ್ರೋಲ್, ಡೀಸೆಲ್ ಸುಡುವುದರಿಂದ ಇಡೀ ಭೂಮಿಯ ತಾಪಮಾನ ಏರುತ್ತಿದೆ; ನೆರೆ ಹಾವಳಿ, ಸುಂಟರಗಾಳಿ, ತೀವ್ರ ಬರಗಾಲ, ಕಾಡಿಗೆ ಬೆಂಕಿ, ಭೂಕುಸಿತಗಳಂಥ ಸಂಕಟಗಳ ವರ್ತಮಾನ ಎಲ್ಲ ದೇಶಗಳಿಂದ ದಿನೇ ದಿನೇ ಬರುತ್ತಿದೆ. ಇದರ ಕುರಿತು ಜನಜಾಗೃತಿ ಮೂಡಿಸಲೆಂದು ಬ್ರಿಟನ್, ಕೆನಡಾ, ನಾರ್ವೆ ದೇಶಗಳ ಪ್ರಧಾನಮಂತ್ರಿಗಳು ಅದೆಷ್ಟೊ ಬಾರಿ ಸೈಕಲ್ ಸವಾರಿ ಮಾಡಿದ್ದಾರೆ.</p>.<p>ನೊಬೆಲ್ ವಿಜ್ಞಾನಿ ವೆಂಕಟರಾಮನ್ ರಾಮಕೃಷ್ಣನ್ ಕೂಡ ಬೆಂಗಳೂರಿಗೆ ಬಂದಾಗ ಐಐಎಸ್ಸಿ ಕ್ಯಾಂಪಸ್ನಲ್ಲಿ ಸೈಕಲ್ ತುಳಿದೇ ಸುತ್ತಿದ್ದಾರೆ. ಪೆಡಲ್ ತುಳಿಯುವುದು ನಮಗೂ ಒಳ್ಳೆಯದು, ಜಗತ್ತಿಗೂ ಒಳ್ಳೆಯದೆಂಬ ಪ್ರಾತ್ಯಕ್ಷಿಕೆಯನ್ನು ನಮ್ಮ ಒಬ್ಬ ಸಂಸದರಾದರೂ ತೋರಿಸಿದ್ದು ಇದು ಇತರ ಸಂಸದರಿಗೆ, ಶಾಸಕರಿಗೆ, ಪಂಚಾಯಿತಿ ಸದಸ್ಯರಿಗೆ, ಮಾಸ್ತರರುಗಳಿಗೆ, ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕು. ಸ್ವತಃ ಡಿ.ಕೆ.ಸುರೇಶ್ ತಾವು ಪ್ರತಿನಿಧಿಸುವ ಮತಕ್ಷೇತ್ರ<br />ದಲ್ಲಿ ಸುತ್ತುವಾಗ ಮಾಮೂಲು ಹತ್ತಾರು ಕಾರುಗಳ ಮೆರವಣಿಗೆಯ ಬದಲು ಸೈಕಲ್ ತುಳಿದರೆ ಬಿಡದಿ, ರಾಮನಗರ, ಚನ್ನಪಟ್ಟಣಗಳ ಯುವಜನರಿಗೂ ಮಾರ್ಗ ತೋರಿದಂತಾಗುತ್ತದೆ.</p>.<p>ನಾಗೇಶ ಹೆಗಡೆ, ಕೆಂಗೇರಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಮ್ಮ ಸಂಸದ ಡಿ.ಕೆ.ಸುರೇಶ್ ಮೊನ್ನೆ ಸಂಸತ್ ಅಧಿವೇಶನಕ್ಕೆ ಸೈಕಲ್ ಮೇಲೆ ಹೋದರೆಂಬ ಸುದ್ದಿ ಓದಿ ನನ್ನಂಥ ಅನೇಕ ಪರಿಸರಪ್ರೇಮಿಗಳಿಗೆ ತುಂಬ ಸಂತೋಷವಾಗಿದೆ. ಪೆಟ್ರೋಲ್, ಡೀಸೆಲ್ ಸುಡುವುದರಿಂದ ಇಡೀ ಭೂಮಿಯ ತಾಪಮಾನ ಏರುತ್ತಿದೆ; ನೆರೆ ಹಾವಳಿ, ಸುಂಟರಗಾಳಿ, ತೀವ್ರ ಬರಗಾಲ, ಕಾಡಿಗೆ ಬೆಂಕಿ, ಭೂಕುಸಿತಗಳಂಥ ಸಂಕಟಗಳ ವರ್ತಮಾನ ಎಲ್ಲ ದೇಶಗಳಿಂದ ದಿನೇ ದಿನೇ ಬರುತ್ತಿದೆ. ಇದರ ಕುರಿತು ಜನಜಾಗೃತಿ ಮೂಡಿಸಲೆಂದು ಬ್ರಿಟನ್, ಕೆನಡಾ, ನಾರ್ವೆ ದೇಶಗಳ ಪ್ರಧಾನಮಂತ್ರಿಗಳು ಅದೆಷ್ಟೊ ಬಾರಿ ಸೈಕಲ್ ಸವಾರಿ ಮಾಡಿದ್ದಾರೆ.</p>.<p>ನೊಬೆಲ್ ವಿಜ್ಞಾನಿ ವೆಂಕಟರಾಮನ್ ರಾಮಕೃಷ್ಣನ್ ಕೂಡ ಬೆಂಗಳೂರಿಗೆ ಬಂದಾಗ ಐಐಎಸ್ಸಿ ಕ್ಯಾಂಪಸ್ನಲ್ಲಿ ಸೈಕಲ್ ತುಳಿದೇ ಸುತ್ತಿದ್ದಾರೆ. ಪೆಡಲ್ ತುಳಿಯುವುದು ನಮಗೂ ಒಳ್ಳೆಯದು, ಜಗತ್ತಿಗೂ ಒಳ್ಳೆಯದೆಂಬ ಪ್ರಾತ್ಯಕ್ಷಿಕೆಯನ್ನು ನಮ್ಮ ಒಬ್ಬ ಸಂಸದರಾದರೂ ತೋರಿಸಿದ್ದು ಇದು ಇತರ ಸಂಸದರಿಗೆ, ಶಾಸಕರಿಗೆ, ಪಂಚಾಯಿತಿ ಸದಸ್ಯರಿಗೆ, ಮಾಸ್ತರರುಗಳಿಗೆ, ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕು. ಸ್ವತಃ ಡಿ.ಕೆ.ಸುರೇಶ್ ತಾವು ಪ್ರತಿನಿಧಿಸುವ ಮತಕ್ಷೇತ್ರ<br />ದಲ್ಲಿ ಸುತ್ತುವಾಗ ಮಾಮೂಲು ಹತ್ತಾರು ಕಾರುಗಳ ಮೆರವಣಿಗೆಯ ಬದಲು ಸೈಕಲ್ ತುಳಿದರೆ ಬಿಡದಿ, ರಾಮನಗರ, ಚನ್ನಪಟ್ಟಣಗಳ ಯುವಜನರಿಗೂ ಮಾರ್ಗ ತೋರಿದಂತಾಗುತ್ತದೆ.</p>.<p>ನಾಗೇಶ ಹೆಗಡೆ, ಕೆಂಗೇರಿ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>