ಕಾಂಗ್ರೆಸ್ ಹೈಕಮಾಂಡ್, ಪಕ್ಷದ ಕರ್ನಾಟಕ ಘಟಕವನ್ನು ದೇವೇಗೌಡರ ಪದತಲಕ್ಕೆ ಕೆಡವಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಟ್ಟ ಖುಷಿಯಲ್ಲಿದೆ. ರಾಹುಲ್ ಗಾಂಧಿ ಬೆಂಬಲವಿದ್ದರೆ ಕಾಂಗ್ರೆಸ್ ನಾಯಕರನ್ನು ಬೆರಳ ತುದಿಯಲ್ಲಿ ಕುಣಿಸಬಹುದು ಎಂದುಕೊಂಡಿದ್ದಾರೆ ಮುಖ್ಯಮಂತ್ರಿ. ಅದರಂತೆಯೇ ರಾಜ್ಯಭಾರ ನಡೆದಿದೆ. ಸಚಿವರು ಯಾರೇ ಇರಲಿ, ಎಲ್ಲ ಖಾತೆಗಳಲ್ಲೂ ಕೈ ಆಡಿಸುವ ಸರ್ವ ಸ್ವಾತಂತ್ರ್ಯ ಮುಖ್ಯಮಂತ್ರಿಯವರ ಸೋದರ ಹೊಂದಿದ್ದಾರೆ ಎಂಬುದು ವಿಧಾನಸೌಧದ ಕಂಬಗಳಿಗೂ ತಿಳಿದ ವಿಷಯ.