ರಾಜ್ಯದ ಕೆಲವು ಕಾರ್ಖಾನೆಗಳಲ್ಲಿ ಒಂದು ರೀತಿಯ ಸರ್ವಾಧಿಕಾರದ ಆಡಳಿತ ನಡೆಯುತ್ತಿದೆ. ವಿಶೇಷವಾಗಿ ಹಲವಾರು ಕಾರ್ಖಾನೆಗಳು ಶಾಸಕರು, ಸಚಿವರಿಗೆ ಸೇರಿದವಾದ್ದರಿಂದ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಮಾತಿದೆ. ಕಬ್ಬು ಕಳುಹಿಸಿದ 14 ದಿನಗಳಲ್ಲಿ ಹಣ ಪಾವತಿಸಬೇಕು ಎಂಬ ನಿಯಮವಿದ್ದರೂ, ತಿಂಗಳುಗಳೇ ಕಳೆದರೂ ಹಣ ಸಂದಾಯವಾಗುತ್ತಿಲ್ಲ. ಈ ಸಮಸ್ಯೆ ನೀಗಿಸಲು ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.