ನಮ್ಮ ಜನಪ್ರತಿನಿಧಿಗಳು ವಿಧಾನಸಭೆಯ ಕಲಾಪಕ್ಕೆ ಗೈರುಹಾಜರಾಗಿ ಮಾಧ್ಯಮಗಳಿಂದ ತಪ್ಪಿಸಿಕೊಂಡು ಅಲ್ಲಿಲ್ಲಿ ಓಡಾಡುತ್ತಾ ಸಮಯವನ್ನು ಹಾಳು ಮಾಡುತ್ತಿದ್ದಾರೆ. ಆಡಳಿತ ನಡೆಸುತ್ತಿರುವ ಮೈತ್ರಿ ಸರ್ಕಾರದ ಒಂದು ಪಕ್ಷ, ಗೈರುಹಾಜರಾಗುವ ಇಂತಹ ಶಾಸಕರ ವಿರುದ್ಧ ವಿಪ್ ಜಾರಿ ಮಾಡಿದರೂ ಇದಕ್ಕೆ ಅವರು ಕ್ಯಾರೇ ಎನ್ನುತ್ತಿಲ್ಲ. ಶಾಸಕ ಬಸವನಗೌಡ ಪಾಟೀಲ ಯತ್ನಾಳ್ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಅಧಿವೇಶನದಲ್ಲಿ ಪಾಲ್ಗೊಳ್ಳದೆ ಚಿತ್ರಮಂದಿರದಲ್ಲಿ ಸಿನಿಮಾ ವೀಕ್ಷಿಸುತ್ತಾ ಆ ಅಮೂಲ್ಯ ಸಮಯವನ್ನು ಹಾಳು ಮಾಡಿರುವುದು ಖಂಡನೀಯ.