ಈ ಪದ್ಧತಿಯನ್ನು ನಿಷೇಧಿಸುವ ಮೂಲಕ ಆರ್ಡಿಪಿಆರ್, ಇತರ ಇಲಾಖೆಗಳಿಗೆ ಮಾದರಿಯಾಗಿದೆ. ರಾಜ್ಯದ ಎಲ್ಲ ಸರ್ಕಾರಿ ಇಲಾಖೆ ಮತ್ತು ಸರ್ಕಾರಿ ಅನುದಾನಿತ ಎಲ್ಲ ಸಂಸ್ಥೆಗಳು ತಮ್ಮ ಸಭೆ, ಸಮಾರಂಭಗಳಲ್ಲಿ ನೀರಿನ ಬಾಟಲ್ ಬಳಕೆಯನ್ನು ನಿಷೇಧಿಸುವ ಮೂಲಕ ಸರ್ಕಾರದ ಹಣ ಪೋಲಾಗುವುದನ್ನು ತಪ್ಪಿಸುವುದರ ಜೊತೆಗೆ ಪರಿಸರವನ್ನು ರಕ್ಷಿಸಬೇಕಿದೆ. ಎಲ್ಲಾ ಇಲಾಖೆಗಳ ಮುಖ್ಯಸ್ಥರೂ ಇಂಥ ಆದೇಶ ಹೊರಡಿಸಲಿ.