ಗಡಿ ವಿವಾದವನ್ನು ಪದೇ ಪದೇ ಕೆದಕುವುದು ಸರಿಯಲ್ಲ. ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಇತ್ತೀಚಿನ ಉದ್ಧಟತನದ ಮಾತು, ಕನ್ನಡಿಗರು ಮತ್ತು ಮರಾಠಿಗರ ನಡುವಿನ ಬಾಂಧವ್ಯಕ್ಕೆ ಹುಳಿ ಹಿಂಡುವಂತಿದೆ. ಬೆಳಗಾವಿಯು ಕರ್ನಾಟಕಕ್ಕೆ ಸೇರಿದ್ದು ಎಂದು ಎಲ್ಲ ಆಯೋಗಗಳ ವರದಿಗಳು ಸ್ಪಷ್ಟವಾಗಿ ದಾಖಲೆ ಸಮೇತ ಹೇಳಿವೆ. ಇಷ್ಟಾದ ಮೇಲೂ ಮಹಾರಾಷ್ಟ್ರದ ನಾಯಕರು ಇದನ್ನು ಒಪ್ಪಿಕೊಳ್ಳಲು ಸುತರಾಂ ತಯಾರಿಲ್ಲ.