ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೇಖನಿ ಹಿಡಿಯಬೇಕಾದ ಕೈಯಲ್ಲಿ ಹಾರೆ, ಗುದ್ದಲಿ

Last Updated 3 ಮೇ 2019, 20:15 IST
ಅಕ್ಷರ ಗಾತ್ರ

ಕರ್ನಾಟಕದ ‘ಪಂಚನದಿಗಳ ನಾಡು’ ಎಂದು ಹೆಸರಾಗಿರುವ ವಿಜಯಪುರ ಜಿಲ್ಲೆಯು ಶಿಕ್ಷಣದಲ್ಲಿ ಕಳಪೆ ಸಾಧನೆ ತೋರುತ್ತಿರುವುದು ನೋವಿನ ಸಂಗತಿ. ಶಾಲಾ ಹಂತ ಮುಗಿದ ಕೂಡಲೇ ಮಕ್ಕಳನ್ನು ದುಡಿಮೆಗೆ ದೂಡುವ ಪ್ರವೃತ್ತಿ ಇರುವುದು ಈ ಭಾಗದ ದುರ್ದೈವ. ಇದಕ್ಕೆ ಬಡತನವೇ ಕಾರಣ. ಇರುವ ಅಲ್ಪಸ್ವಲ್ಪ ಜಮೀನಿನಲ್ಲಿ ಏನಾದರೂ ಬೆಳೆಯಬೇಕೆಂದರೆ ನೀರಾವರಿ ಸೌಕರ್ಯ ಇಲ್ಲ. ಮಕ್ಕಳನ್ನು ಪೋಷಕರು ದುಡಿಯಲು ಹೊರ ರಾಜ್ಯಗಳಿಗೆ ಕಳುಹಿಸುತ್ತಾರೆ. ಹೀಗಾಗಿ, ಲೇಖನಿ ಹಿಡಿಯಬೇಕಾದ ಕೈಗಳು ಹಾರೆ, ಗುದ್ದಲಿ ಹಿಡಿಯಬೇಕಾಗಿ ಬಂದಿದೆ.

ಶಾಲೆಯಲ್ಲಿ ತರಗತಿಗಳು ಸಮರ್ಪಕವಾಗಿ ನಡೆಯದಿರುವುದು, ಶಿಕ್ಷಕರು ಮತ್ತು ಮಕ್ಕಳ ನಡುವೆ ಹೊಂದಾಣಿಕೆ ಕೊರತೆ, ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸದಿರುವುದು... ಇವೆಲ್ಲವೂ ಶಾಲಾ ಕಾಲೇಜುಗಳ ನೂನ್ಯತೆಯಾಗಿದ್ದು, ಅಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕಾಗಿದೆ.

-ಮಹಾಂತೇಶ ಎಮ್. ಯಂಕಂಚಿ,ಸಿಂದಗಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT