ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೌರ ಕಾರ್ಮಿಕರ ಬೇಡಿಕೆಗೆ ಸ್ಪಂದಿಸಿ

ಅಕ್ಷರ ಗಾತ್ರ

ರಾಜ್ಯದಲ್ಲಿರುವ ಪೌರ ಕಾರ್ಮಿಕರು ಹಲವಾರು ವರ್ಷಗಳಿಂದ ತಮ್ಮ ಬೇಡಿಕೆಗಳಿಗಾಗಿ ಹೋರಾಟ ಮಾಡುತ್ತಾ ಬಂದಿದ್ದಾರೆ. ಕಡಿಮೆ ವೇತನದಲ್ಲಿ ಸೇವೆ ಸಲ್ಲಿಸುವ ಇವರು ಸೇವಾ ಅಭದ್ರತೆಯ ನಡುವೆಯೇ ನಗರ, ಪಟ್ಟಣಗಳ ಶುಚಿತ್ವಕ್ಕಾಗಿ ದುಡಿಯುವ ಶ್ರಮಜೀವಿಗಳು. ಪೌರ ಕಾರ್ಮಿಕರ ಸೇವಾಕಾರ್ಯ ಅನನ್ಯವಾಗಿದ್ದು, ಅದಕ್ಕೆ ಬೆಲೆ ಕಟ್ಟಲಾಗದು.

ಇಂದಿನ ತುಟ್ಟಿ ದಿನಮಾನದಲ್ಲಿ ಜೀವನ ನಿರ್ವಹಣೆ ಕಷ್ಟವಾಗುತ್ತಿದ್ದರೂ ಪೌರ ಕಾರ್ಮಿಕರ ನ್ಯಾಯಯುತ ಬೇಡಿಕೆಗಳಿಗೆ ಸರ್ಕಾರದಿಂದ ಸರಿಯಾದ ಸ್ಪಂದನೆ ಸಿಗದಿರುವುದು ಖಂಡನೀಯ. ಈಗಲಾದರೂ ಇವರ ಬೇಡಿಕೆಗಳಿಗೆ ಸರ್ಕಾರ ತುರ್ತಾಗಿ ಸ್ಪಂದಿಸಬೇಕು.

- ಆರ್.ಬಿ.ಜಿ.ಘಂಟಿ,ಅಮೀನಗಡ,ಬಾಗಲಕೋಟೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT