ಅಖಿಲ ಭಾರತ ಕಾಂಗ್ರೆಸ್ ಸಮಿತಿಯ (ಎಐಸಿಸಿ) ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ನಿರೀಕ್ಷಿಸಿದಂತೆಯೇ ಆಯ್ಕೆಯಾಗಿದ್ದಾರೆ. ಪಕ್ಷನಿಷ್ಠೆಗೆ ಹೆಸರಾದವರು. ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ಸಚಿವರಾಗಿ ಬೇರೆ ಬೇರೆ ಖಾತೆಗಳನ್ನು ದಕ್ಷತೆಯಿಂದ ನಿಭಾಯಿಸಿದ್ದಾರೆ. ನೆಹರೂ–ಗಾಂಧಿ ಕುಟುಂಬಕ್ಕೆ ನಿಷ್ಠರಾಗಿದ್ದರೂ ಮುಖ್ಯಮಂತ್ರಿ ಸ್ಥಾನ ಮಾತ್ರ ಹಲವು ಸಲ ಕೈಬಿಟ್ಟು ಹೋದದ್ದು ವಿಪರ್ಯಾಸ.