ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ: ಮತ್ತೊಂದು ಪಕ್ಷದ ಉಸಾಬರಿ ಏಕೆ?

Last Updated 20 ಅಕ್ಟೋಬರ್ 2022, 23:15 IST
ಅಕ್ಷರ ಗಾತ್ರ

‘ಪಕ್ಷ ಉಚ್ಛ್ರಾಯ ಸ್ಥಿತಿಯಲ್ಲಿ ಇದ್ದಾಗ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಕೊಟ್ಟಿದ್ದರೆ ನಾವೂ ಒಪ್ಪಿಕೊಳ್ಳುತ್ತಿದ್ದೆವು. ಇಂಥ ಸ್ಥಿತಿಯಲ್ಲಿ ನಾವು ಒಪ್ಪಿಕೊಳ್ಳುವುದಿಲ್ಲ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಅದು, ಇನ್ನೊಂದು ಪಕ್ಷಕ್ಕೆ ಸಂಬಂಧಿಸಿದ ವಿಚಾರ. ಇವರಿಗೆ ಆ ಉಸಾಬರಿ ಏಕೆ!? ಇವರು ಒಪ್ಪಿದರೆಷ್ಟು, ಬಿಟ್ಟರೆಷ್ಟು?

ವಿರೋಧ ಪಕ್ಷದ ಒಂದು ಉನ್ನತ ಸ್ಥಾನವು ಕರ್ನಾಟಕದ ಒಬ್ಬ ನಾಯಕನಿಗೆ ಸಿಕ್ಕಿದಾಗ, ಮುಖ್ಯಮಂತ್ರಿಯಾಗಿ ಔಪಚಾರಿಕವಾಗಿ ಅವರನ್ನು ಅಭಿನಂದಿಸುವುದು ಇವರ ಘನತೆ, ಗೌರವವನ್ನು ಹೆಚ್ಚಿಸುವ ವಿಷಯ. ಆ ಕೆಲಸವನ್ನು ಈ ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಮಾಡಿದ್ದಾರೆ. ಬೊಮ್ಮಾಯಿ ಅವರಿಗೆ ಆ ರೀತಿ ಮಾಡುವುದು ಅಪಥ್ಯವೆನಿಸಿದ್ದರೆ ಸುಮ್ಮನಿದ್ದು ಬಿಡಬಹುದಿತ್ತು.

ಚಾವಲ್ಮನೆ ಸುರೇಶ್ ನಾಯಕ್,ಹಾಲ್ಮತ್ತೂರ್, ಕೊಪ್ಪ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT