ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಸುಮಲತಾ ಅವರ ವಿರುದ್ಧ ತಮ್ಮ ಮಗ ನಿಖಿಲ್ ಅನುಭವಿಸಿದ ಸೋಲಿನಿಂದ ಹತಾಶರಾಗಿರುವ ಕುಮಾರಸ್ವಾಮಿ, ಸುಮಲತಾ ವಿರುದ್ಧ ನಿರಂತರವಾಗಿ ಪೂರ್ವಗ್ರಹಪೀಡಿತ ಹೇಳಿಕೆಗಳನ್ನು ನೀಡುತ್ತಿರುವುದನ್ನು ಜನಸಾಮಾನ್ಯರು, ವಿಶೇಷವಾಗಿ ಮಂಡ್ಯದ ಜನ ಗಮನಿಸುತ್ತಾ ಬಂದಿದ್ದಾರೆ. ಇನ್ನು ಮುಂದಾದರೂ ಅವರು ಇಂತಹ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸಲಿ.