ಖಾಸಗೀಕರಣದಿಂದಾಗಿ ಸಾರ್ವಜನಿಕ ವಲಯದ ಬ್ಯಾಂಕುಗಳು ಮತ್ತೆ ಶ್ರೀಮಂತರ ಸೊತ್ತಾಗಲಿವೆಯೇ ಎಂಬ ಅನುಮಾನ ಸಹಜವಾಗಿ ಉಂಟಾಗುತ್ತದೆ. ಹಾಗಾಗಿ ರಾಷ್ಟ್ರೀಕೃತ ಬ್ಯಾಂಕುಗಳ ಅಧಿಕಾರಿಗಳ ಒಕ್ಕೂಟ ದೇಶದಾದ್ಯಂತ ಇದೇ 15 ಮತ್ತು 16ರಂದು ಎರಡು ದಿನಗಳ ಮುಷ್ಕರಕ್ಕೆ ಕರೆ ಕೊಟ್ಟಿದೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು.