598 ಕನ್ನಡ ಶಾಲೆಗಳಲ್ಲಿ ಶೂನ್ಯ ದಾಖಲಾತಿ, ಕಲಬುರ್ಗಿಯಲ್ಲಿ ನುಡಿ ಜಾತ್ರೆಯ ಸಂಭ್ರಮ, ಸಿದ್ಧಲಿಂಗಯ್ಯ ಅವರಿಗೆ ಪ್ರತಿಷ್ಠಿತ ಪಂಪ ಪ್ರಶಸ್ತಿ... ಹೀಗೆ ಕನ್ನಡ ನುಡಿಗೆ ಸಂಬಂಧಿಸಿದಂತೆ ವೈರುಧ್ಯದ ವರದಿಗಳು ಪ್ರಕಟ
ವಾಗಿವೆ (ಪ್ರ.ವಾ., ಫೆ. 4). ಕನ್ನಡ ಮಾಧ್ಯಮಕ್ಕೆ ದಾಖಲಾಗುವ ಮಕ್ಕಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕಡಿಮೆಯಾಗಿ, ಇಂಗ್ಲಿಷ್ ಮಾಧ್ಯಮಕ್ಕೆ ದಾಖಲಾಗುವ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಿದೆ. ಶಾಲೆಗಳಲ್ಲಿ ಕನ್ನಡ
ಕಲಿಕೆ ಕುಂಠಿತಗೊಳ್ಳುತ್ತಿರುವುದು ಆತಂಕಕಾರಿ ಬೆಳವಣಿಗೆ. ಶಾಲೆಗಳಲ್ಲಿ ಉಳಿಯದ ಕನ್ನಡವನ್ನು ಸಮ್ಮೇಳನ, ಸಮಾರಂಭಗಳ ಮೂಲಕ ಉಳಿಸಿಕೊಳ್ಳಲಾಗದು.