ಬಡ್ತಿ ಮೀಸಲಾತಿ ಕುರಿತ ಸುಪ್ರೀಂ ಕೋರ್ಟ್ ತೀರ್ಪು (ಪ್ರ.ವಾ., ಮೇ 11) ನ್ಯಾಯಾಂಗದ ವಿಶ್ವಾಸಾರ್ಹತೆಯನ್ನು ಮತ್ತೊಮ್ಮೆ ಎತ್ತಿಹಿಡಿದಿದೆ. ಯಾಕೆಂದರೆ ಎಸ್ಸಿ–ಎಸ್ಟಿ ನೌಕರರಿಗೆ ಬಡ್ತಿಯಲ್ಲಿ ಮೀಸಲಾತಿ ನೀಡುವ ವಿಷಯವನ್ನು ಸಂವಿಧಾನದ 16(4)(ಎ) ವಿಧಿ ಬಹಳ ಸ್ಪಷ್ಟವಾಗಿ ದಾಖಲಿಸುತ್ತದೆ. ರಾಜ್ಯದ ಅಧೀನದಲ್ಲಿರುವ ಸೇವೆಗಳಲ್ಲಿ ಅನುಸೂಚಿತ ಜಾತಿಗಳು ಮತ್ತುಅನುಸೂಚಿತ ಬುಡಕಟ್ಟುಗಳವರು ಸಾಕಷ್ಟು ಪ್ರಾತಿನಿಧ್ಯ ಹೊಂದಿಲ್ಲವೆಂದು ರಾಜ್ಯವು ಅಭಿಪ್ರಾಯಪಟ್ಟಲ್ಲಿ, ಯಾವುದೇ ವರ್ಗದ ಅಥವಾ ವರ್ಗಗಳ ಹುದ್ದೆಗಳಿಗೆ, ತತ್ಪರಿಣಾಮದ ಜ್ಯೇಷ್ಠತೆಯೊಂದಿಗೆ ಬಡ್ತಿ ವಿಷಯದಲ್ಲಿ ಮೀಸಲಾತಿಯ ಯಾವುದೇ ಉಪಬಂಧವನ್ನು ಮಾಡಲು ರಾಜ್ಯಕ್ಕಿರುವ ಅಧಿಕಾರವನ್ನು ಪ್ರತಿಬಂಧಿಸತಕ್ಕದಲ್ಲ ಎಂದು ಹೇಳುತ್ತದೆ.