ಆದರೆ, ಇದೇ 14ರಿಂದ ಆರಂಭಗೊಳ್ಳಲಿರುವ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಪ್ರಶ್ನೋತ್ತರ ಅವಧಿಯನ್ನು ರದ್ದು ಮಾಡಲು ನಿರ್ಧರಿಸಿರುವುದು ದುರದೃಷ್ಟಕರ. ಕೊರೊನಾದಿಂದಾಗಿ ಜನ ಈಗಾಗಲೇ ಹಸಿವು, ನಿರುದ್ಯೋಗ ಮತ್ತು ಆರ್ಥಿಕ ಸಂಕಷ್ಟದಂತಹ ಸಮಸ್ಯೆಗಳ ಸುಳಿಯಲ್ಲಿ ಸಿಲುಕಿದ್ದಾರೆ. ಹೀಗಿರುವಾಗ ತಮ್ಮ ಜನಪ್ರತಿನಿಧಿಗಳ ಮೂಲಕ ಇಂತಹ ಸಮಸ್ಯೆಗಳಿಗೆ ಸರ್ಕಾರದಿಂದ ಪರಿಹಾರ ಅಥವಾ ಭರವಸೆ ಪಡೆದುಕೊಳ್ಳುವ ಅವರ ಅಭಿಲಾಷೆಗೆ ಇದರಿಂದ ಹಿನ್ನಡೆಯಾಗುತ್ತದೆ. ಹೀಗಾಗಿ ಇದು ಜನರ ಗಾಯದ ಮೇಲೆ ಬರೆ ಎಳೆಯುವಂತಹ ನಿರ್ಧಾರವೇ ಆಗಿದೆ.