<p>ಪ್ರಶ್ನೆಗಳು ಮನುಷ್ಯರನ್ನು ಜಾಗೃತರನ್ನಾಗಿ ಮಾಡಿ, ಸರಿಯಾದ ದಾರಿಯತ್ತ ಕರೆದೊಯ್ಯುತ್ತವೆ. ಹಾಗೆಯೇ ಸಂಸತ್ತಿನಲ್ಲಿ ಜನಪ್ರತಿನಿಧಿಗಳು ಸರ್ಕಾರವನ್ನು ಕೇಳುವ ಪ್ರಶ್ನೆಗಳು, ದೇಶದ ವಾಸ್ತವದ ಸ್ಥಿತಿಗತಿಯ ಚಿತ್ರಣವನ್ನು ಅನಾವರಣಗೊಳಿಸುತ್ತವೆ. ಈ ಮೂಲಕ ಅನೇಕ ಅವ್ಯವಸ್ಥೆಗಳಿಗೆ ಮದ್ದು ಹುಡುಕಲು ನೆರವಾಗುತ್ತವೆ.</p>.<p>ಆದರೆ, ಇದೇ 14ರಿಂದ ಆರಂಭಗೊಳ್ಳಲಿರುವ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಪ್ರಶ್ನೋತ್ತರ ಅವಧಿಯನ್ನು ರದ್ದು ಮಾಡಲು ನಿರ್ಧರಿಸಿರುವುದು ದುರದೃಷ್ಟಕರ. ಕೊರೊನಾದಿಂದಾಗಿ ಜನ ಈಗಾಗಲೇ ಹಸಿವು, ನಿರುದ್ಯೋಗ ಮತ್ತು ಆರ್ಥಿಕ ಸಂಕಷ್ಟದಂತಹ ಸಮಸ್ಯೆಗಳ ಸುಳಿಯಲ್ಲಿ ಸಿಲುಕಿದ್ದಾರೆ. ಹೀಗಿರುವಾಗ ತಮ್ಮ ಜನಪ್ರತಿನಿಧಿಗಳ ಮೂಲಕ ಇಂತಹ ಸಮಸ್ಯೆಗಳಿಗೆ ಸರ್ಕಾರದಿಂದ ಪರಿಹಾರ ಅಥವಾ ಭರವಸೆ ಪಡೆದುಕೊಳ್ಳುವ ಅವರ ಅಭಿಲಾಷೆಗೆ ಇದರಿಂದ ಹಿನ್ನಡೆಯಾಗುತ್ತದೆ. ಹೀಗಾಗಿ ಇದು ಜನರ ಗಾಯದ ಮೇಲೆ ಬರೆ ಎಳೆಯುವಂತಹ ನಿರ್ಧಾರವೇ ಆಗಿದೆ.</p>.<p><strong>ನಾಗೇಶ ಹರಳಯ್ಯ, ಕಲುಬುರ್ಗಿ</strong><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪ್ರಶ್ನೆಗಳು ಮನುಷ್ಯರನ್ನು ಜಾಗೃತರನ್ನಾಗಿ ಮಾಡಿ, ಸರಿಯಾದ ದಾರಿಯತ್ತ ಕರೆದೊಯ್ಯುತ್ತವೆ. ಹಾಗೆಯೇ ಸಂಸತ್ತಿನಲ್ಲಿ ಜನಪ್ರತಿನಿಧಿಗಳು ಸರ್ಕಾರವನ್ನು ಕೇಳುವ ಪ್ರಶ್ನೆಗಳು, ದೇಶದ ವಾಸ್ತವದ ಸ್ಥಿತಿಗತಿಯ ಚಿತ್ರಣವನ್ನು ಅನಾವರಣಗೊಳಿಸುತ್ತವೆ. ಈ ಮೂಲಕ ಅನೇಕ ಅವ್ಯವಸ್ಥೆಗಳಿಗೆ ಮದ್ದು ಹುಡುಕಲು ನೆರವಾಗುತ್ತವೆ.</p>.<p>ಆದರೆ, ಇದೇ 14ರಿಂದ ಆರಂಭಗೊಳ್ಳಲಿರುವ ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ಪ್ರಶ್ನೋತ್ತರ ಅವಧಿಯನ್ನು ರದ್ದು ಮಾಡಲು ನಿರ್ಧರಿಸಿರುವುದು ದುರದೃಷ್ಟಕರ. ಕೊರೊನಾದಿಂದಾಗಿ ಜನ ಈಗಾಗಲೇ ಹಸಿವು, ನಿರುದ್ಯೋಗ ಮತ್ತು ಆರ್ಥಿಕ ಸಂಕಷ್ಟದಂತಹ ಸಮಸ್ಯೆಗಳ ಸುಳಿಯಲ್ಲಿ ಸಿಲುಕಿದ್ದಾರೆ. ಹೀಗಿರುವಾಗ ತಮ್ಮ ಜನಪ್ರತಿನಿಧಿಗಳ ಮೂಲಕ ಇಂತಹ ಸಮಸ್ಯೆಗಳಿಗೆ ಸರ್ಕಾರದಿಂದ ಪರಿಹಾರ ಅಥವಾ ಭರವಸೆ ಪಡೆದುಕೊಳ್ಳುವ ಅವರ ಅಭಿಲಾಷೆಗೆ ಇದರಿಂದ ಹಿನ್ನಡೆಯಾಗುತ್ತದೆ. ಹೀಗಾಗಿ ಇದು ಜನರ ಗಾಯದ ಮೇಲೆ ಬರೆ ಎಳೆಯುವಂತಹ ನಿರ್ಧಾರವೇ ಆಗಿದೆ.</p>.<p><strong>ನಾಗೇಶ ಹರಳಯ್ಯ, ಕಲುಬುರ್ಗಿ</strong><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>