‘ಹುಬ್ಬಳ್ಳಿ- ಅಂಕೋಲಾ ರೈಲು ಯೋಜನೆಗೆ ಪರಿಸರವಾದಿಗಳು ವಿರೋಧ ವ್ಯಕ್ತಪಡಿಸುತ್ತಾರೆ, ತಡೆಯಾಜ್ಞೆ ತರುತ್ತಾರೆ ಮತ್ತು ಸರ್ಕಾರ ಸುದೀರ್ಘ ಕಾನೂನು ಹೋರಾಟ ಮಾಡಬೇಕಾಗುತ್ತದೆ’ ಎಂದು ಹೇಳಿದ್ದ ಕೇಂದ್ರ ರೈಲ್ವೆ ಸಚಿವ ಪೀಯೂಷ್ ಗೋಯಲ್, ದಟ್ಟಡವಿಯ ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಸಾಗುವ ಮೈಸೂರು- ಕುಶಾಲನಗರ ಹೊಸ ರೈಲು ಯೋಜನೆಗೆ ಅನುಮತಿ ನೀಡಿದ್ದು ಆಶ್ಚರ್ಯಕರವಾಗಿದೆ. ಈ ದ್ವಿಮುಖ ನೀತಿಯ ಹಿಂದಿನ ಉದ್ದೇಶ ಏನು ಎಂಬುದನ್ನು ಅವರು ತಿಳಿಸಬೇಕು.