ಅಬ್ಬಬ್ಬಾ ಎಂದರೆ ಈ ಕರ್ತವ್ಯಚ್ಯುತರ ಹೆಸರನ್ನು ಪತ್ರಿಕೆಗಳಲ್ಲಿ ಲೋಕಾಯುಕ್ತರು ಪ್ರಕಟಿಸಬಹುದು. ಸಚಿವರು ಮತ್ತು ಶಾಸಕರು ಇದಕ್ಕೆಲ್ಲ ಅಧೀರರಾಗುವಷ್ಟುಮೃದು ಚರ್ಮದವರೇ? ಕಾಯ್ದೆ, ನಿಯಮಗಳನ್ನು ನಮ್ಮ ಜನ ಏಕೆ ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ ಎನ್ನುವುದಕ್ಕೆ ಇಂಥ ಪ್ರಸಂಗಗಳಲ್ಲಿ ಉತ್ತರ ಕಂಡುಕೊಳ್ಳುವುದು ಸಾಧ್ಯ. ದುರಂತವೆಂದರೆ, ಶಾಸನಕರ್ತರೇ ಶಾಸನ ಪಾಲಿಸದಿರುವುದು. ಹಾಗಾಗಿ, ಶಾಸನ ಅಥವಾ ಕಾಯ್ದೆಗಳಿಗೆ ಬೆಲೆ ಇಲ್ಲದಂತಾಗಿ, ಕಡ್ಡಾಯವಾಗಿ ಸಲ್ಲಿಸಬೇಕಾದ ವಿವರಗಳನ್ನು ಸಲ್ಲಿಸದಿರುವವರ ಬಗ್ಗೆ ನಾವು ಪತ್ರಿಕೆಗಳಲ್ಲಿ ಪ್ರತಿವರ್ಷವೂ ಓದುವಂತಾಗಿದೆ. ಈ ವರ್ಷ ಇವರು, ಬರುವ ವರ್ಷ ಇನ್ನಾರೋ? ಹೀಗೇ ಸಾಗುತ್ತದೆ ಇಂಥ ಕರ್ತವ್ಯಚ್ಯುತರ ವೀರಗಾಥೆ!