ಜಮ್ಮು ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತ ಜಾರಿಯಾದಾಗಿನಿಂದ ಉಗ್ರರ ವಿರುದ್ಧದ ಕಾರ್ಯಾಚರಣೆ ತೀವ್ರಗೊಂಡಿದೆ. ರಾಷ್ಟ್ರೀಯ ಭದ್ರತಾ ಪಡೆ (ಎನ್ಎಸ್ಜಿ) ನಿಯೋಜನೆಯಿಂದ ಉಗ್ರಗಾಮಿಗಳು, ಪ್ರತ್ಯೇಕತಾವಾದಿಗಳು ಹಾಗೂ ಸೇನಾ ಪಡೆಗಳತ್ತ ಕಲ್ಲು ತೂರುತ್ತಿದ್ದವರು ಕುಳಿತಲ್ಲೆ ಬೆವರುತ್ತಿದ್ದಾರೆ.
ಇಲ್ಲಿಯವರೆಗೂ ಹೋರಾಟಗಾರರೆಂದು ಬಿಂಬಿಸಿಕೊಳ್ಳುತ್ತಿದ್ದ ಪ್ರತ್ಯೇಕತಾವಾದಿ ನಾಯಕರೆಲ್ಲಾ ಸಾಲು ಸಾಲಾಗಿ ಜೈಲು ಪಾಲಾಗುತ್ತಿದ್ದಾರೆ. ಇದೊಂದು ಮಹತ್ವದ ಬೆಳವಣಿಗೆಯಾಗಿದ್ದು, ಈ ಮೂಲಕ ಭಾರತ ವಿರೋಧಿಗಳಿಗೆ ಸ್ಪಷ್ಟ ಸಂದೇಶ ರವಾನೆಯಾದಂತಾಗಿದೆ.
ಏನೇ ಆಗಲಿ, ಕಾಶ್ಮೀರದಿಂದ ಭಯೋತ್ಪಾದಕರು, ಪ್ರತ್ಯೇಕತಾವಾದಿಗಳು, ಕಲ್ಲು ತೂರಾಟ ನಡೆಸುವಂಥದೇಶದ್ರೋಹಿಗಳನ್ನು ಮೂಲೋತ್ಪಾಟನೆ ಮಾಡುವವರೆಗೂ ಭದ್ರತಾ ಪಡೆಗಳು ವಿಶ್ರಮಿಸದಿರಲಿ.