ಪ್ರಸ್ತುತ ಬಿಟ್ಕಾಯಿನ್ ಹ್ಯಾಕಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ- ಕಾಂಗ್ರೆಸ್ ನಡುವೆ ದಿನೇ ದಿನೇ ನಡೆಯುತ್ತಿರುವ ವಾಕ್ಸಮರ ರಾಜ್ಯದ ಜನರ ಗಮನ ಸೆಳೆಯುತ್ತಿದೆ. ಇನ್ನು ಚಿಕ್ಕ ವಯಸ್ಸಿನ ವಂಚಕ ಶ್ರೀಕೃಷ್ಣ ಸರ್ಕಾರಿ ಸಂಸ್ಥೆಗಳ ವೆಬ್ಸೈಟ್ಗಳಿಗೆ ಕನ್ನ ಹಾಕಿ ಸಾವಿರಾರು ಕೋಟಿ ರೂಪಾಯಿ ವಂಚನೆ ಮಾಡಿರುವುದು ಆಶ್ಚರ್ಯದ ಸಂಗತಿ. ಆದರೆ ಸರ್ಕಾರ ಹಾಗೂ ಆಡಳಿತಾರೂಢ ಬಿಜೆಪಿ ನಾಯಕರು ಹ್ಯಾಕರ್ನಿಂದ ಸರ್ಕಾರ ಮತ್ತು ಸಾರ್ವಜನಿಕರಿಗೆ ಆದ ನಷ್ಟಕ್ಕೆ ನ್ಯಾಯ ಒದಗಿಸುವ ಪ್ರಯತ್ನ ಮಾಡುವ ಬದಲು, ಸರ್ಕಾರದ ಮೇಲೆ ಗಂಭೀರ ಆರೋಪ ಮಾಡುತ್ತಿರುವ ಕಾಂಗ್ರೆಸ್ ಪಕ್ಷ ಮತ್ತು ಅದರ ನಾಯಕರ ಮೇಲೆ ತಿರುಗಿ ಬೀಳುತ್ತಿರುವುದು ಹಾಸ್ಯಾಸ್ಪದ ಸಂಗತಿ.