ರಾಜ್ಯ ಆರೋಗ್ಯ ಇಲಾಖೆಯಲ್ಲಿ ಭ್ರಷ್ಟಾಚಾರ ಮಿತಿಮೀರಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಹೇಳಿದ್ದಾರೆ. ಇದು ಅಕ್ಷರಶಃ ಸತ್ಯ. ಕಟ್ಟಡ ಕಾಮಗಾರಿಯಲ್ಲಿ ಮಾತ್ರವಲ್ಲದೆ ಇಡೀ ಆರೋಗ್ಯ ಇಲಾಖೆಯಲ್ಲಿ ಲಂಚಗುಳಿತನ ತಾಂಡವವಾಡುತ್ತಿದೆ. ಅಧಿಕಾರಿಗಳ ನೇಮಕಾತಿ, ವರ್ಗಾವಣೆ ಮತ್ತು ಮೆಡಿಕಲ್ ಕಾಲೇಜುಗಳ ನಿರ್ದೇಶಕ ಹುದ್ದೆಯ ನೇಮಕಾತಿಗೆ ಹಣವೇ ಪ್ರಧಾನ ಪಾತ್ರ ವಹಿಸುತ್ತಿದೆ ಎಂಬ ಆರೋಪಗಳು ಇವೆ. ಇಂತಹ ಸ್ಥಿತಿಯಲ್ಲಿ ಉತ್ತಮ ಆರೋಗ್ಯ ವ್ಯವಸ್ಥೆಯನ್ನು ನಿರೀಕ್ಷಿಸಲು ಸಾಧ್ಯವಿಲ್ಲ.