<p>ಪತ್ರಕರ್ತರಾದ ಫಿಲಿಪ್ಪೀನ್ಸ್ನ ಮರಿಯಾ ರೆಸ್ಸಾ ಮತ್ತು ರಷ್ಯಾದ ಡಿಮಿಟ್ರಿ ಮುರಾಟೋವ್ ಅವರಿಗೆ 2021ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾದ ಸುದ್ದಿಯನ್ನು (ಪ್ರ.ವಾ., ಅ. 9) ಓದಿ ಸಂತಸವಾಯಿತು. ಈ ಪ್ರಶಸ್ತಿಯ ಆಯ್ಕೆ ಸಮಿತಿ ಅಧ್ಯಕ್ಷರಾದ ಬೆರಿಟ್ ರೀಸ್ ಆ್ಯಂಡರ್ಸನ್ ಅವರು ಪ್ರಶಸ್ತಿ ಘೋಷಣೆ ಸಂದರ್ಭದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಹೇಳಿದ ಮಾತುಗಳು ಹೀಗಿವೆ: ‘ವಿಶ್ವದೆಲ್ಲೆಡೆ ಪ್ರಜಾಪ್ರಭುತ್ವ ಮತ್ತು ಪತ್ರಿಕಾ ಸ್ವಾತಂತ್ರ್ಯ ಪ್ರತಿಕೂಲ ಪರಿಸ್ಥಿತಿಯನ್ನು ಎದುರಿಸುತ್ತಿವೆ. ಅದರ ರಕ್ಷಣೆಗಾಗಿ ನಿಲ್ಲುವ ಎಲ್ಲ ಪತ್ರಕರ್ತರನ್ನೂ ಈ ಇಬ್ಬರು ಪ್ರಶಸ್ತಿ ಪುರಸ್ಕೃತರು ಪ್ರತಿನಿಧಿಸುತ್ತಾರೆ’. ಈ ಮಾತು ವಿಶ್ವದಾದ್ಯಂತ ಇರುವ ಪತ್ರಕರ್ತರಿಗೆ ಸಂದ ಅತಿ ದೊಡ್ಡ ಗೌರವದ ಮಾತಾಗಿದೆ.</p>.<p>ಇಂಥ ಮಾತುಗಳ ಮೂಲಕ ಇಡೀ ವಿಶ್ವದ ಪತ್ರಕರ್ತರೆಲ್ಲ ಒಂದೇ ಕುಟುಂಬದವರು ಎಂದು ತಿಳಿಸುವ ಆ್ಯಂಡರ್ಸನ್ ಅವರ ದೃಷ್ಟಿಕೋನ ಪ್ರಶಂಸಾರ್ಹವಾದದ್ದು. ಮರಿಯಾ ಮತ್ತು ಡಿಮಿಟ್ರಿ ಸೇರಿದಂತೆ ಪ್ರಜಾಪ್ರಭುತ್ವ ಹಾಗೂ ಪತ್ರಿಕಾ ಸ್ವಾತಂತ್ರ್ಯದ ರಕ್ಷಣೆಗಾಗಿ ನಿಲ್ಲುವ ವಿಶ್ವದ ಎಲ್ಲ ಪತ್ರಕರ್ತರೂ ಅಭಿನಂದನಾರ್ಹರು.</p>.<p><strong>- ಎಲ್.ಎಸ್.ಶಿವಮೂರ್ತಿ,ಬೆಂಗಳೂರು</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪತ್ರಕರ್ತರಾದ ಫಿಲಿಪ್ಪೀನ್ಸ್ನ ಮರಿಯಾ ರೆಸ್ಸಾ ಮತ್ತು ರಷ್ಯಾದ ಡಿಮಿಟ್ರಿ ಮುರಾಟೋವ್ ಅವರಿಗೆ 2021ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾದ ಸುದ್ದಿಯನ್ನು (ಪ್ರ.ವಾ., ಅ. 9) ಓದಿ ಸಂತಸವಾಯಿತು. ಈ ಪ್ರಶಸ್ತಿಯ ಆಯ್ಕೆ ಸಮಿತಿ ಅಧ್ಯಕ್ಷರಾದ ಬೆರಿಟ್ ರೀಸ್ ಆ್ಯಂಡರ್ಸನ್ ಅವರು ಪ್ರಶಸ್ತಿ ಘೋಷಣೆ ಸಂದರ್ಭದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಹೇಳಿದ ಮಾತುಗಳು ಹೀಗಿವೆ: ‘ವಿಶ್ವದೆಲ್ಲೆಡೆ ಪ್ರಜಾಪ್ರಭುತ್ವ ಮತ್ತು ಪತ್ರಿಕಾ ಸ್ವಾತಂತ್ರ್ಯ ಪ್ರತಿಕೂಲ ಪರಿಸ್ಥಿತಿಯನ್ನು ಎದುರಿಸುತ್ತಿವೆ. ಅದರ ರಕ್ಷಣೆಗಾಗಿ ನಿಲ್ಲುವ ಎಲ್ಲ ಪತ್ರಕರ್ತರನ್ನೂ ಈ ಇಬ್ಬರು ಪ್ರಶಸ್ತಿ ಪುರಸ್ಕೃತರು ಪ್ರತಿನಿಧಿಸುತ್ತಾರೆ’. ಈ ಮಾತು ವಿಶ್ವದಾದ್ಯಂತ ಇರುವ ಪತ್ರಕರ್ತರಿಗೆ ಸಂದ ಅತಿ ದೊಡ್ಡ ಗೌರವದ ಮಾತಾಗಿದೆ.</p>.<p>ಇಂಥ ಮಾತುಗಳ ಮೂಲಕ ಇಡೀ ವಿಶ್ವದ ಪತ್ರಕರ್ತರೆಲ್ಲ ಒಂದೇ ಕುಟುಂಬದವರು ಎಂದು ತಿಳಿಸುವ ಆ್ಯಂಡರ್ಸನ್ ಅವರ ದೃಷ್ಟಿಕೋನ ಪ್ರಶಂಸಾರ್ಹವಾದದ್ದು. ಮರಿಯಾ ಮತ್ತು ಡಿಮಿಟ್ರಿ ಸೇರಿದಂತೆ ಪ್ರಜಾಪ್ರಭುತ್ವ ಹಾಗೂ ಪತ್ರಿಕಾ ಸ್ವಾತಂತ್ರ್ಯದ ರಕ್ಷಣೆಗಾಗಿ ನಿಲ್ಲುವ ವಿಶ್ವದ ಎಲ್ಲ ಪತ್ರಕರ್ತರೂ ಅಭಿನಂದನಾರ್ಹರು.</p>.<p><strong>- ಎಲ್.ಎಸ್.ಶಿವಮೂರ್ತಿ,ಬೆಂಗಳೂರು</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>