<p class="Briefhead">ರಾಜ್ಯದಲ್ಲಿ ಪ್ರಸ್ತುತ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಹಾಗೂ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆಗಳು ಜರುಗಲಿವೆ. ವಿವಿಧ ರಾಜಕೀಯ ಪಕ್ಷಗಳ ಧುರೀಣರು ಹಾಗೂ ಕಾರ್ಯಕರ್ತರು ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಈ ಸಂದರ್ಭದಲ್ಲಿ ಅಲ್ಲಲ್ಲಿ ಸರ್ಕಾರಿ ನೌಕರರೂ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ತಮ್ಮ ಇಷ್ಟದ ಅಭ್ಯರ್ಥಿ ಹಾಗೂ ಪಕ್ಷದ ಪರವಾಗಿ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳುತ್ತಿರುವ, ವಿಶೇಷವಾಗಿ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಯಾವ ಹಿಂಜರಿಕೆಯೂ ಇಲ್ಲದೆ ತೊಡಗಿಕೊಂಡಿರುವ ಸುದ್ದಿ ಕೇಳಿಬರುತ್ತಿದೆ.</p>.<p>ಕರ್ನಾಟಕ ನಾಗರಿಕ ಸೇವಾ ನಿಯಮಗಳ ಅನುಸಾರ, ಸರ್ಕಾರಿ ನೌಕರರು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ರಾಜಕಾರಣದಲ್ಲಿ ಹಾಗೂ ಚುನಾವಣೆಯಲ್ಲಿ ಭಾಗವಹಿಸುವುದು, ಚುನಾವಣಾ ಚಿಹ್ನೆಗಳನ್ನು ತಮ್ಮ ವಾಹನ, ಮನೆಗಳ ಮೇಲೆ ಪ್ರದರ್ಶಿಸುವಂತಹ ನಡವಳಿಕೆಗಳನ್ನು ನಿಷೇಧಿಸಲಾಗಿದೆ. ಈ ನಿಯಮ ಉಲ್ಲಂಘಿಸುವವರ ವಿರುದ್ಧ ಸರ್ಕಾರ ಕಠಿಣ ಶಿಸ್ತು ಕ್ರಮವನ್ನು ಜರುಗಿಸಬಹುದಾಗಿದೆ. ಹೀಗಿದ್ದೂ ಕೆಲ ನೌಕರರು ರಾಜಕಾರಣದಲ್ಲಿ ಪಾಲ್ಗೊಳ್ಳುತ್ತಿರುವುದು ವಿವೇಕಯುತ ನಡೆ ಆಗಲಾರದು.</p>.<p><strong>- ಪ್ರೊ. ಮಲ್ಲಿಕಾರ್ಜುನ ಕಲಮರಹಳ್ಳಿ, <span class="Designate">ದಾವಣಗೆರೆ</span></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="Briefhead">ರಾಜ್ಯದಲ್ಲಿ ಪ್ರಸ್ತುತ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಹಾಗೂ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆಗಳು ಜರುಗಲಿವೆ. ವಿವಿಧ ರಾಜಕೀಯ ಪಕ್ಷಗಳ ಧುರೀಣರು ಹಾಗೂ ಕಾರ್ಯಕರ್ತರು ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಈ ಸಂದರ್ಭದಲ್ಲಿ ಅಲ್ಲಲ್ಲಿ ಸರ್ಕಾರಿ ನೌಕರರೂ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ತಮ್ಮ ಇಷ್ಟದ ಅಭ್ಯರ್ಥಿ ಹಾಗೂ ಪಕ್ಷದ ಪರವಾಗಿ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳುತ್ತಿರುವ, ವಿಶೇಷವಾಗಿ ಶಿಕ್ಷಕರ ಮತ್ತು ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಯಾವ ಹಿಂಜರಿಕೆಯೂ ಇಲ್ಲದೆ ತೊಡಗಿಕೊಂಡಿರುವ ಸುದ್ದಿ ಕೇಳಿಬರುತ್ತಿದೆ.</p>.<p>ಕರ್ನಾಟಕ ನಾಗರಿಕ ಸೇವಾ ನಿಯಮಗಳ ಅನುಸಾರ, ಸರ್ಕಾರಿ ನೌಕರರು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ರಾಜಕಾರಣದಲ್ಲಿ ಹಾಗೂ ಚುನಾವಣೆಯಲ್ಲಿ ಭಾಗವಹಿಸುವುದು, ಚುನಾವಣಾ ಚಿಹ್ನೆಗಳನ್ನು ತಮ್ಮ ವಾಹನ, ಮನೆಗಳ ಮೇಲೆ ಪ್ರದರ್ಶಿಸುವಂತಹ ನಡವಳಿಕೆಗಳನ್ನು ನಿಷೇಧಿಸಲಾಗಿದೆ. ಈ ನಿಯಮ ಉಲ್ಲಂಘಿಸುವವರ ವಿರುದ್ಧ ಸರ್ಕಾರ ಕಠಿಣ ಶಿಸ್ತು ಕ್ರಮವನ್ನು ಜರುಗಿಸಬಹುದಾಗಿದೆ. ಹೀಗಿದ್ದೂ ಕೆಲ ನೌಕರರು ರಾಜಕಾರಣದಲ್ಲಿ ಪಾಲ್ಗೊಳ್ಳುತ್ತಿರುವುದು ವಿವೇಕಯುತ ನಡೆ ಆಗಲಾರದು.</p>.<p><strong>- ಪ್ರೊ. ಮಲ್ಲಿಕಾರ್ಜುನ ಕಲಮರಹಳ್ಳಿ, <span class="Designate">ದಾವಣಗೆರೆ</span></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>