ರಾಷ್ಟ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಈಗಲಾದರೂ ಸ್ವಪ್ರತಿಷ್ಠೆ ಮತ್ತು ಅಹಂ ಅನ್ನು ಬದಿಗಿಟ್ಟು, ಮಾಜಿ ಪ್ರಧಾನಿ ಹಾಗೂ ಅರ್ಥಶಾಸ್ತ್ರಜ್ಞ ಡಾ. ಮನಮೋಹನ್ ಸಿಂಗ್, ಅಭಿಜಿತ್ ಬ್ಯಾನರ್ಜಿ, ಕರ್ನಾಟಕ ಮೂಲದವರಾದ ಅಂತರರಾಷ್ಟ್ರೀಯ ಹಣಕಾಸು ನಿಧಿಯ ಮುಖ್ಯ ಆರ್ಥಿಕ ತಜ್ಞೆ ಗೀತಾ ಗೋಪಿನಾಥ್ ಮುಂತಾದ ತಜ್ಞರ ಸಲಹೆ, ಸೂಚನೆಗಳನ್ನು ಪಡೆದು ದೇಶದ ಆರ್ಥಿಕ ಪುನಶ್ಚೇತನಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ.
-ಮನೋಹರ ಜಿ.ಎನ್., ತುಮಕೂರು