<p>ಚಾಮರಾಜನಗರ ಜಿಲ್ಲೆಯ ಬಂಡೀಪುರ ವನ್ಯಜೀವಿ ಅಭಯಾರಣ್ಯದ ಮೂಲಕವೇ ಮೈಸೂರು- ಊಟಿ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಹಾಗೂ ಮೈಸೂರು- ಕೇರಳದ ಸುಲ್ತಾನಬತ್ತೇರಿ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಗಳು ಹಾದುಹೋಗಿವೆ. ಇವೆರಡೂ ರಸ್ತೆಗಳಲ್ಲಿ ರಾತ್ರಿ ವೇಳೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧವಿದ್ದರೂಉಳಿದ ಅವಧಿಯಲ್ಲಿ ವನ್ಯಜೀವಿಗಳು ರಸ್ತೆ ದಾಟಲು ಮುಂದಾದರೆ ಅವುಗಳ ಪ್ರಾಣಕ್ಕೇ ಸಂಚಕಾರವಾಗುತ್ತಿದೆ.</p>.<p>ವನ್ಯಜೀವಿಗಳಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಅರಣ್ಯ ಪ್ರದೇಶದಲ್ಲಿರುವ 5 ಕಿ.ಮೀ. ಉದ್ದದ ರಸ್ತೆ ಜಾಗದಲ್ಲಿ ಮೇಲ್ಸೇತುವೆ ನಿರ್ಮಿಸುವ ಪ್ರಸ್ತಾವ ಮುಂದಿಟ್ಟಿದ್ದಾರೆ. ಅವರ ಕಾಳಜಿಯು ಶ್ಲಾಘನೀಯ.</p>.<p>ಆದರೆ ಮೇಲ್ಸೇತುವೆ ನಿರ್ಮಿಸುವ ಬದಲು, ಈಗಿರುವರಸ್ತೆಗಳ ಎರಡೂ ಬದಿಗೆ 10 ಅಡಿ ಎತ್ತರದ ಉಕ್ಕಿನ ಬೇಲಿ ನಿರ್ಮಿಸಿ, ರಸ್ತೆಯಲ್ಲಿ 1 ಕಿ.ಮೀ.ಗೆ ಒಂದರಂತೆ ಸುಮಾರುನೂರಡಿ ಉದ್ದದ ಮೇಲ್ಸೇತುವೆ ನಿರ್ಮಿಸುವುದು ಸೂಕ್ತ<br />ಎನಿಸುತ್ತದೆ. ಇದರಿಂದ ವನ್ಯಪ್ರಾಣಿಗಳು ರಸ್ತೆ ಹತ್ತದೆ ಮೇಲ್ಸೇತುವೆಯ ಅಡಿಯಿಂದ ನಿರಾತಂಕವಾಗಿ ಓಡಾಡುವಂತೆ ಮಾಡಬಹುದು. ಜೊತೆಗೆ ರಾತ್ರಿ ವೇಳೆಯಲ್ಲೂ ವಾಹನ ಓಡಾಟಕ್ಕೆ ಅನುಮತಿ ಕೊಡಬಹುದು.</p>.<p>ವನ್ಯಜೀವಿ ಸಂರಕ್ಷಣೆಗಾಗಿ ದುಡಿಯುವ ಸಂಘಟನೆಗಳು, ತಜ್ಞರು ಈ ಬಗ್ಗೆ ಸಲಹೆ ನೀಡುವುದು ಒಳಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಾಮರಾಜನಗರ ಜಿಲ್ಲೆಯ ಬಂಡೀಪುರ ವನ್ಯಜೀವಿ ಅಭಯಾರಣ್ಯದ ಮೂಲಕವೇ ಮೈಸೂರು- ಊಟಿ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಹಾಗೂ ಮೈಸೂರು- ಕೇರಳದ ಸುಲ್ತಾನಬತ್ತೇರಿ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಗಳು ಹಾದುಹೋಗಿವೆ. ಇವೆರಡೂ ರಸ್ತೆಗಳಲ್ಲಿ ರಾತ್ರಿ ವೇಳೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧವಿದ್ದರೂಉಳಿದ ಅವಧಿಯಲ್ಲಿ ವನ್ಯಜೀವಿಗಳು ರಸ್ತೆ ದಾಟಲು ಮುಂದಾದರೆ ಅವುಗಳ ಪ್ರಾಣಕ್ಕೇ ಸಂಚಕಾರವಾಗುತ್ತಿದೆ.</p>.<p>ವನ್ಯಜೀವಿಗಳಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಅರಣ್ಯ ಪ್ರದೇಶದಲ್ಲಿರುವ 5 ಕಿ.ಮೀ. ಉದ್ದದ ರಸ್ತೆ ಜಾಗದಲ್ಲಿ ಮೇಲ್ಸೇತುವೆ ನಿರ್ಮಿಸುವ ಪ್ರಸ್ತಾವ ಮುಂದಿಟ್ಟಿದ್ದಾರೆ. ಅವರ ಕಾಳಜಿಯು ಶ್ಲಾಘನೀಯ.</p>.<p>ಆದರೆ ಮೇಲ್ಸೇತುವೆ ನಿರ್ಮಿಸುವ ಬದಲು, ಈಗಿರುವರಸ್ತೆಗಳ ಎರಡೂ ಬದಿಗೆ 10 ಅಡಿ ಎತ್ತರದ ಉಕ್ಕಿನ ಬೇಲಿ ನಿರ್ಮಿಸಿ, ರಸ್ತೆಯಲ್ಲಿ 1 ಕಿ.ಮೀ.ಗೆ ಒಂದರಂತೆ ಸುಮಾರುನೂರಡಿ ಉದ್ದದ ಮೇಲ್ಸೇತುವೆ ನಿರ್ಮಿಸುವುದು ಸೂಕ್ತ<br />ಎನಿಸುತ್ತದೆ. ಇದರಿಂದ ವನ್ಯಪ್ರಾಣಿಗಳು ರಸ್ತೆ ಹತ್ತದೆ ಮೇಲ್ಸೇತುವೆಯ ಅಡಿಯಿಂದ ನಿರಾತಂಕವಾಗಿ ಓಡಾಡುವಂತೆ ಮಾಡಬಹುದು. ಜೊತೆಗೆ ರಾತ್ರಿ ವೇಳೆಯಲ್ಲೂ ವಾಹನ ಓಡಾಟಕ್ಕೆ ಅನುಮತಿ ಕೊಡಬಹುದು.</p>.<p>ವನ್ಯಜೀವಿ ಸಂರಕ್ಷಣೆಗಾಗಿ ದುಡಿಯುವ ಸಂಘಟನೆಗಳು, ತಜ್ಞರು ಈ ಬಗ್ಗೆ ಸಲಹೆ ನೀಡುವುದು ಒಳಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>