ಪಕ್ಷಿಗಳು ಪರಿಸರ ಸಮತೋಲನದ ಮಾನದಂಡಗಳು. ಕೆರೆಗಳ ನೀರು ವಿವಿಧ ಕಾರಣಗಳಿಂದ ಮಲಿನ
ಗೊಂಡಿರುತ್ತದೆ. ಕೆರೆಗಳು ಇರುವ ಸ್ಥಳಗಳಲ್ಲಿ ಗಿಡಮರಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿರುತ್ತದೆ. ಒತ್ತುವರಿ, ಶಬ್ದಮಾಲಿನ್ಯ, ಪ್ರವಾಸಿಗರ ಗದ್ದಲ... ಮೊದಲಾದ ಕಾರಣಗಳಿಂದ ಪಕ್ಷಿಗಳು ದೂರ ಹೋಗಿವೆ. ‘ಪಕ್ಷಿಗಳ ಆವಾಸಸ್ಥಾನವನ್ನು ಕಸಿದುಕೊಂಡರೆ ಅವು ಏನನ್ನೂ ಹೇಳದೆ ಅಲ್ಲಿಂದ ನಿರ್ಗಮಿಸುತ್ತವೆ. ಆದರೆ ಅವುಗಳ ನಿರ್ಗಮನ ನಮ್ಮ ನಿರ್ಗಮನದ ಮುನ್ನುಡಿಯಷ್ಟೇ’ ಎಂಬ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ ಮಾತು ನೆನಪಾಗುತ್ತಿದೆ.