ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಹಾಸನ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಲು ತಮ್ಮ ಪತ್ನಿ ಭವಾನಿ ಕಾರಣ ಎಂದು ಸಚಿವಎಚ್.ಡಿ.ರೇವಣ್ಣ ಹೇಳಿದ್ದಾರೆ. ಅಷ್ಟೇ ಅಲ್ಲದೆ, ‘ಇದಕ್ಕೆ ಕಾರಣ ಎನ್ನಲಾಗುತ್ತಿರುವ ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಏನು ಕಡಿದು ಕಟ್ಟೆ ಹಾಕಿದ್ದಾರೆ, ಯಾವ ಶಾಲೆಗೆ ಹೋಗಿ ಪಾಠ ಮಾಡಿದ್ದಾರೆ, ಎಷ್ಟು ಸಭೆಗಳನ್ನು ನಡೆಸಿದ್ದಾರೆ?’ ಎಂಬ ಉಡಾಫೆ ಮಾತನ್ನಾಡಿದ್ದಾರೆ.