ಕರ್ನಾಟಕ ಸರ್ಕಾರ ಕಳೆದ 10–15 ವರ್ಷಗಳಲ್ಲಿ ಹಾದಿಗೊಂದು ಬೀದಿಗೊಂದು ವಿಶ್ವವಿದ್ಯಾಲಯವನ್ನು ತೆರೆದುಬಿಟ್ಟಿದೆ. ಇದರ ಹಿಂದೆ, ಕಾಸು ಈಸಿಕೊಂಡು ಯಾರನ್ನೋ ಕುಲಪತಿ ಮಾಡುವುದೊಂದೇ ಉದ್ದೇಶವಿದ್ದು, ಅದು ಚೆನ್ನಾಗಿಯೇ ಕಾರ್ಯಗತ ಆಗಿದೆ. ಆದರೆ ಈ ‘ಹೊಸ ವಿಶ್ವವಿದ್ಯಾಲಯ’ಗಳಿಗೆ ಸರ್ಕಾರದಿಂದ ಸೂಕ್ತ ಅನುದಾನ, ಬೋಧಕ ಹುದ್ದೆಗಳ ಸೃಷ್ಟಿ ಆಗಲೇ ಇಲ್ಲ.