ಖಾಸಗಿ ಕ್ಷೇತ್ರದಲ್ಲಿ ಕರ್ನಾಟಕದವರಿಗೆ ಆದ್ಯತೆ ನೀಡುವ ಬಗ್ಗೆ ಈ ವರದಿಯಲ್ಲಿರುವ ಅಂಶಕ್ಕೆ ಈಗಾಗಲೇ ರಾಜ್ಯ ಸಂಪುಟದಲ್ಲಿ ಅನುಮೋದನೆ ಸಿಕ್ಕಿದೆ. ಇದರ ಜೊತೆಗೆ, ಕೇಂದ್ರ ಸರ್ಕಾರದ ವ್ಯಾಪ್ತಿಯ ಐಬಿಪಿಎಸ್, ಎಸ್ಎಸ್ಸಿ ತರಹದ ಕೇಂದ್ರ ಸರ್ಕಾರಿ ಉದ್ಯೋಗದ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ಬೇಕು, ಕನ್ನಡಿಗರಿಗೆ ಕರ್ನಾಟಕದ ಉದ್ಯೋಗಗಳಲ್ಲಿ ಹೆಚ್ಚಿನ ಪಾಲು ಸಿಗಲು ಪರೀಕ್ಷೆಯ ನಿಯಮ ಬದಲಾಗಬೇಕು ಎನ್ನುವ ನಿಟ್ಟಿನಲ್ಲಿ ಪ್ರಾಧಿಕಾರವು ಕೇಂದ್ರ ಸಚಿವರುಗಳಿಗೂ ಅನೇಕ ಬಾರಿ ಮನವಿ ಸಲ್ಲಿಸಿದೆ.