ಹೈಕೋರ್ಟ್ ತೀರ್ಪಿನಿಂದ ಹುದ್ದೆ ಕಳೆದುಕೊಳ್ಳುವ ಭೀತಿ ಎದುರಿಸುತ್ತಿದ್ದ 1998ನೇ ಸಾಲಿನ 28 ಗೆಜೆಟೆಡ್ ಅಧಿಕಾರಿಗಳಿಗೆ ಸೇವಾ ಭದ್ರತೆ ಕಲ್ಪಿಸಲು ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಲು ನಿರ್ಧರಿಸಿದೆ (ಪ್ರ.ವಾ., ಮೇ 28). ಇದುಎಷ್ಟು ಸರಿ? ‘ಅಕ್ರಮ ನೇಮಕಾತಿಗೆ ನೇಮಕಾತಿ ಪ್ರಾಧಿಕಾರದ ನ್ಯೂನತೆ ಕಾರಣವೇ ಹೊರತು ಯಾವುದೇ ಅಭ್ಯರ್ಥಿ ವೈಯಕ್ತಿಕವಾಗಿ ಅಕ್ರಮ ಎಸಗಿರುವುದು ಸಾಬೀತಾಗಿಲ್ಲ’ ಎಂದು ಸರ್ಕಾರ ಸಮರ್ಥನೆ ನೀಡಿದೆ. ಪ್ರಾಧಿಕಾರದ ನ್ಯೂನತೆ ಬಳಸಿಕೊಂಡು ಉದ್ಯೋಗ ಗಿಟ್ಟಿಸಿಕೊಂಡಿದ್ದರು ಎಂಬುದನ್ನು ಸರ್ಕಾರವೇ ಒಪ್ಪಿಕೊಂಡಂತಾಗಿದೆ.