ಆಗ ಆಯೋಗವು ಚುನಾವಣಾ ವೇಳಾಪಟ್ಟಿ ಈಗಾಗಲೇ ಘೋಷಣೆ ಆಗಿರುವುದರಿಂದ ವೇಳಾಪಟ್ಟಿಯ ಮಿತಿಯೊಳಗೆ ಅಷ್ಟೊಂದು ದೊಡ್ಡ ಸಂಖ್ಯೆಯ ವಿವಿಪ್ಯಾಟ್ಗಳ ರಸೀದಿಗಳನ್ನು ತಾಳೆ ಹಾಕಲು ಸಾಧ್ಯವಿಲ್ಲ ಎಂದು ಸಬೂಬು ಹೇಳಿತ್ತು. ಈಗ ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭೆಗಳಿಗೆ ಚುನಾವಣೆ ಘೋಷಣೆಯಾಗಿದೆ. ಉಳಿದ ರಾಜ್ಯಗಳಲ್ಲಿಯ ಉಪಚುನಾವಣೆಗಳಿಗೆ ವೇಳಾಪಟ್ಟಿ ಘೋಷಣೆ ಆಗಿದೆ.