ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರನ್ನು ಪೆದ್ದ ಎಂದು ಕರೆದು ವಾಲ್ಮೀಕಿ ಸಮುದಾಯಕ್ಕೆ ಅಪಮಾನ ಮಾಡಿದ್ದಾರೆ, ಕೂಡಲೇ ಅವರು ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಒತ್ತಾಯಿಸಿ
ದ್ದಾರೆ! ಅಲ್ಲಾ ಸ್ವಾಮಿ, ರಾಜಕೀಯ ವ್ಯಕ್ತಿಗಳಾದ ನೀವು ಒಬ್ಬರನ್ನೊಬ್ಬರು ನಿಂದಿಸಿಕೊಳ್ಳುವುದು ಸಾಮಾನ್ಯ
ವಾಗಿಬಿಟ್ಟಿದೆ. ಯಾವುದೇ ಒಬ್ಬ ವ್ಯಕ್ತಿ ಇನ್ನೊಬ್ಬ ವ್ಯಕ್ತಿಯನ್ನು ನಿಂದಿಸಿದರೆ ಅದು ಹೇಗೆ ಇಡೀ ಒಂದು ಸಮುದಾಯವನ್ನು ಅಪಮಾನಿಸಿದಂತೆ ಆಗುತ್ತದೆ?