ರಾಮನಗರ ಜಿಲ್ಲೆಯ ಹೆಸರು ಬದಲಿಸುವ ಅವಶ್ಯಕತೆ ಇಲ್ಲ ಎಂದು ಜೆಡಿಎಸ್ ಮುಖಂಡ ಎಚ್.ಡಿ. ಕುಮಾರಸ್ವಾಮಿ ಹೇಳಿದರೆ, ‘ಹೆಸರು ಬದಲಾವಣೆಯ ಯಾವುದೇ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ಆದರೆ, ರಾಜಕಾರಣಿಗಳು ದೇವಸ್ಥಾನಗಳನ್ನು ಸುತ್ತಲು ತಾವು ಆಗಾಗ ಭೇಟಿ ಕೊಡುವ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹೆಸರುಗಳನ್ನಂತೂ ಜರೂರಾಗಿ ಬದಲಿಸಬೇಕಾದ ಅವಶ್ಯಕತೆ ಇದೆ!